ಲಕ್ಷಾಂತರ ಮೌಲ್ಯದ ಆಭರಣ ಕಳವು
ಕಾರ್ಕಳ: ಅಡುಗೆ ಮನೆಯ ಬಾಗಿಲಿನ ಬೀಗವನ್ನು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ತಾಲ್ಲೂಕಿನ ಕಲ್ಯಾ ಗ್ರಾಮದಲ್ಲಿ ಈಚೆಗೆ ನಡೆದಿದೆ.
ಗ್ರಾಮದ ಕಂಗಿತ್ಲು ಎಂಬಲ್ಲಿನ ನಿವಾಸಿ ಉಷಾ ಅವರ ನಿರೀಕ್ಷಾ ನಿವಾಸ ಎಂಬ ಮನೆಯ ಗೋದ್ರೆಜ್ನಲ್ಲಿ ಹಾಗೂ ಸ್ಟೀಲಿನ ಡಬ್ಬದಲ್ಲಿರಿಸಿದ್ದ ₹ 4.5 ಲಕ್ಷ ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.