ಲಾಕ್ಡೌನ್ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಕಡಿಯಾಳಿ ಗಣೇಶೋತ್ಸವ ಸಮಿತಿ ಹಾಗೂ ಖಾಸಗಿ ಬಸ್ ಮಾಲೀಕರು ಒಂದು ವಾರಗಳ ಕಾಲ ನಗರದಲ್ಲಿ ಉಚಿತವಾಗಿ ಬಸ್ಗಳನ್ನು ಓಡಿಸುತ್ತಿದ್ದು, ಬಸ್ಗಳಲ್ಲಿ ಬಿಜೆಪಿ ಹಾಗೂ ಸಾಮಾಜಿಕ ಕಾರ್ಯಕರ್ತರು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಕೂಡ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸಿದರು. ದಿನಕರ ಬಾಬು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗುವ ಮುನ್ನ ಚಾಲಕ ವೃತ್ತಿಯಲ್ಲಿದ್ದವರು.