ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಮಾತನಾಡಿ, ನ್ಯಾಯಾಧೀಶರು ಆಸ್ಪತ್ರೆ ಎಲ್ಲ ವಿಭಾಗಗಳಿಗೆ ಭೇಟಿನೀಡಿ ಪರಿಶೀಲಿಸಿದ್ದಾರೆ. ಆಸ್ಪತ್ರೆಯ ಸಮಸ್ಯೆಗಳನ್ನು ಗಮನಕ್ಕೆ ತರಲಾಗಿದೆ. ಬಿಆರ್ಎಸ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಆಸ್ಪತ್ರೆಯನ್ನು ನಿರ್ವಹಣೆಯನ್ನುಮೇ 31, 2022ರಿಂದ ನಿಲ್ಲಿಸಿದ್ದು, ಸರ್ಕಾರವೇ ನಿರ್ವಹಣೆ ಮಾಡುತ್ತಿದೆ. ಆಸ್ಪತ್ರೆಯಲ್ಲಿವೈದ್ಯರ ಕೊರತೆ ಇಲ್ಲ ಆದರೆ, ಸಿಬ್ಬಂದಿ ಕೊರತೆ ಇದೆ. ಸಮಸ್ಯೆ ನಿವಾರಣೆಯಾದರೆ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಸಿಗಲಿದೆ ಎಂದರು.