<p><strong>ಉಡುಪಿ</strong>: ಹಲಾಲ್ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಭಾನುವಾರ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್ಎಫ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು.</p>.<p>‘ಹಲಾಲ್ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗೋಣ’ ಎಂದು ಈಶ್ವರಪ್ಪ ಸವಾಲು ಹಾಕಿದರು.</p>.<p>ಉಡುಪಿಯಲ್ಲಿ 6 ವಿದ್ಯಾರ್ಥಿನಿಯರು ಹಿಜಾಬ್ ಗೊಂದಲ ಹುಟ್ಟುಹಾಕಿದಾಗಲೇ ಸಮವಸ್ತ್ರ ಮಾತ್ರ ಧರಿಸಿ ಕಾಲೇಜಿಗೆ ಹೋಗುವಂತೆ ಬುದ್ಧಿ ಹೇಳಿದ್ದರೆ ಇಡೀ ರಾಜ್ಯ ಹಾಗೂ ದೇಶ ತಣ್ಣಗೆ ಇರುತ್ತಿತ್ತು. ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾದಾಗ ಕಾಂಗ್ರೆಸ್ ನಾಯಕರು ಖಂಡಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ದೇಶದಲ್ಲಿ ನಿರ್ನಾಮವಾಗಿರುವ ಕಾಂಗ್ರೆಸ್ ಪಕ್ಷ ಹಿಜಾಬ್, ರಾಷ್ಟ್ರಧ್ವಜ, ಹಲಾಲ್ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಮುಸ್ಲಿಮರನ್ನು ತೃಪ್ತಿಪಡಿಸುವ ಪ್ರಯತ್ನ ಒಳ್ಳೆಯದಲ್ಲ. ಬಿಜೆಪಿ ಹಿಂದುತ್ವದ ಪರವಾಗಿದ್ದರೂ ಮುಸ್ಲಿಮರ ವಿರೋಧಿಯಲ್ಲ. ರಾಷ್ಟ್ರಭಕ್ತ ಮುಸ್ಲಿಮರಿಗೆ ಗೌರವ ಕೊಡುತ್ತೇವೆ. ಆದರೆ, ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದರು.</p>.<p>ಹರ್ಷ ಕೊಲೆ ಪ್ರಕರಣದಲ್ಲಿ ಎನ್ಐಎ ತನಿಖೆ ಆರಂಭವಾಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು.</p>.<p><a href="https://www.prajavani.net/district/dharwad/karnataka-legislative-council-speaker-basavaraj-horatti-announces-to-join-bjp-soon-925014.html" itemprop="url">ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ: ಬಸವರಾಜ ಹೊರಟ್ಟಿ ಘೋಷಣೆ </a></p>.<p>ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಹಾಗೂ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನೂ ಗೆಲ್ಲಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p><a href="https://www.prajavani.net/district/bengaluru-city/hindu-muslim-conflict-in-karnataka-devanur-mahadeva-state-government-politics-925011.html" itemprop="url">ಜನಸಮುದಾಯ ಒಡೆಯಲು ಸರ್ಕಾರದಿಂದಲೇ ಕುಮ್ಮಕ್ಕು:ದೇವನೂರ ಮಹಾದೇವ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಹಲಾಲ್ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಭಾನುವಾರ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್ಎಫ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು.</p>.<p>‘ಹಲಾಲ್ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗೋಣ’ ಎಂದು ಈಶ್ವರಪ್ಪ ಸವಾಲು ಹಾಕಿದರು.</p>.<p>ಉಡುಪಿಯಲ್ಲಿ 6 ವಿದ್ಯಾರ್ಥಿನಿಯರು ಹಿಜಾಬ್ ಗೊಂದಲ ಹುಟ್ಟುಹಾಕಿದಾಗಲೇ ಸಮವಸ್ತ್ರ ಮಾತ್ರ ಧರಿಸಿ ಕಾಲೇಜಿಗೆ ಹೋಗುವಂತೆ ಬುದ್ಧಿ ಹೇಳಿದ್ದರೆ ಇಡೀ ರಾಜ್ಯ ಹಾಗೂ ದೇಶ ತಣ್ಣಗೆ ಇರುತ್ತಿತ್ತು. ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾದಾಗ ಕಾಂಗ್ರೆಸ್ ನಾಯಕರು ಖಂಡಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<p>ದೇಶದಲ್ಲಿ ನಿರ್ನಾಮವಾಗಿರುವ ಕಾಂಗ್ರೆಸ್ ಪಕ್ಷ ಹಿಜಾಬ್, ರಾಷ್ಟ್ರಧ್ವಜ, ಹಲಾಲ್ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಮುಸ್ಲಿಮರನ್ನು ತೃಪ್ತಿಪಡಿಸುವ ಪ್ರಯತ್ನ ಒಳ್ಳೆಯದಲ್ಲ. ಬಿಜೆಪಿ ಹಿಂದುತ್ವದ ಪರವಾಗಿದ್ದರೂ ಮುಸ್ಲಿಮರ ವಿರೋಧಿಯಲ್ಲ. ರಾಷ್ಟ್ರಭಕ್ತ ಮುಸ್ಲಿಮರಿಗೆ ಗೌರವ ಕೊಡುತ್ತೇವೆ. ಆದರೆ, ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದರು.</p>.<p>ಹರ್ಷ ಕೊಲೆ ಪ್ರಕರಣದಲ್ಲಿ ಎನ್ಐಎ ತನಿಖೆ ಆರಂಭವಾಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು.</p>.<p><a href="https://www.prajavani.net/district/dharwad/karnataka-legislative-council-speaker-basavaraj-horatti-announces-to-join-bjp-soon-925014.html" itemprop="url">ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ: ಬಸವರಾಜ ಹೊರಟ್ಟಿ ಘೋಷಣೆ </a></p>.<p>ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಹಾಗೂ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನೂ ಗೆಲ್ಲಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p><a href="https://www.prajavani.net/district/bengaluru-city/hindu-muslim-conflict-in-karnataka-devanur-mahadeva-state-government-politics-925011.html" itemprop="url">ಜನಸಮುದಾಯ ಒಡೆಯಲು ಸರ್ಕಾರದಿಂದಲೇ ಕುಮ್ಮಕ್ಕು:ದೇವನೂರ ಮಹಾದೇವ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>