ಹುಟ್ಟೂರಿನಲ್ಲಿ ಭವ್ಯ ಸ್ವಾಗತ: ಹುಟ್ಟೂರಿಗೆ ಆಗಮಿಸಿದ ಸೃಜನ್ ಅವರನ್ನು ಇಲ್ಲಿನ ಅನಂತ ಪದ್ಮನಾಭ ದೇವಸ್ಥಾನದ ಬಳಿ ಸ್ವಾಗತಿಸಿ ಗೌರವಿಸಲಾಯಿತು. ಹೆಬ್ರಿಯಿಂದ ಮುನಿಯಾಲಿನ ತನಕ ತೆರೆದ ವಾಹನದಲ್ಲಿ ಸೃಜನ್ ಅವರನ್ನು ಕರೆತರಲಾಯಿತು. ಗ್ರಾಮ ಪಂಚಾಯಿತಿ ವತಿಯಿಂದ ಅಧ್ಯಕ್ಷ ತಾರಾನಾಥ ಎಸ್.ಬಂಗೇರ, ಚೈತನ್ಯ ಯುವ ವೃಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಸಹಿತ ಹಲವರು ಗೌರವಿಸಿದರು. ಶಿಕ್ಷಕರು, ಕ್ರೀಡಾ ಪ್ರೇಮಿಗಳು, ವಿದ್ಯಾರ್ಥಿಗಳು, ಪ್ರಮುಖರು, ಜನಪ್ರತಿನಿಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.