<p><strong>ಉಡುಪಿ</strong>: ದುಬೈನಲ್ಲಿ ಟೆಕ್ನಿಕಲ್ ಮ್ಯಾನೇಜರ್ ಆಗಿರುವ ನಿಟ್ಟೂರು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ರಾಜೇಶ್ ಕುಮಾರ್ ಕೋವಿಡ್ನಿಂದ ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಗಳಿಗೆ ₹ 50,000 ನೀಡಿದ್ದು, ಭಾನುವಾರ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ 10 ಕಲಾವಿದರಿಗೆ ತಲಾ ₹ 5,000 ವಿತರಿಸಲಾಯಿತು ಎಂದ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದರು.</p>.<p>ಕಲಾರಂಗದಿಂದ ನೆರವು ಪಡೆದವರು ಆರ್ಥಿಕವಾಗಿ ಸಬಲರಾದ ಬಳಿಕ ಸಮಾಜಕ್ಕೆ ಕೈಲಾದ ಸಹಾಯ ನೀಡಬೇಕು ಎಂದು ಮುರಳಿ ಕಡೇಕರ್ ಸಲಹೆ ನೀಡಿದರು.</p>.<p>ರಾಜೇಶ್ 50 ಕುಟುಂಬಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವಷ್ಟು ಆಹಾರ ಸಾಮಾಗ್ರಿಗಳನ್ನು ನೀಡಿದ್ದಾರೆ. ಇಂತಹ ವಿದ್ಯಾರ್ಥಿಗಳ ಸದ್ಗುಣಗಳು ಶಿಕ್ಷಕರಾದವರಿಗೆ ಸಾರ್ಥಕ ಭಾವ ಉಂಟುಮಾಡುತ್ತದೆ ಎಂದರು.</p>.<p>ಈ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ.ಭಟ್, ಹಳೆ ವಿದ್ಯಾರ್ಥಿ ಪಿ.ಕೃಷ್ಣಮೂರ್ತಿ ಭಟ್, ಶಿಕ್ಷಕ ಎಚ್.ಎನ್.ಶೃಂಗೇಶ್ವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ದುಬೈನಲ್ಲಿ ಟೆಕ್ನಿಕಲ್ ಮ್ಯಾನೇಜರ್ ಆಗಿರುವ ನಿಟ್ಟೂರು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ರಾಜೇಶ್ ಕುಮಾರ್ ಕೋವಿಡ್ನಿಂದ ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಗಳಿಗೆ ₹ 50,000 ನೀಡಿದ್ದು, ಭಾನುವಾರ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ 10 ಕಲಾವಿದರಿಗೆ ತಲಾ ₹ 5,000 ವಿತರಿಸಲಾಯಿತು ಎಂದ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದರು.</p>.<p>ಕಲಾರಂಗದಿಂದ ನೆರವು ಪಡೆದವರು ಆರ್ಥಿಕವಾಗಿ ಸಬಲರಾದ ಬಳಿಕ ಸಮಾಜಕ್ಕೆ ಕೈಲಾದ ಸಹಾಯ ನೀಡಬೇಕು ಎಂದು ಮುರಳಿ ಕಡೇಕರ್ ಸಲಹೆ ನೀಡಿದರು.</p>.<p>ರಾಜೇಶ್ 50 ಕುಟುಂಬಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವಷ್ಟು ಆಹಾರ ಸಾಮಾಗ್ರಿಗಳನ್ನು ನೀಡಿದ್ದಾರೆ. ಇಂತಹ ವಿದ್ಯಾರ್ಥಿಗಳ ಸದ್ಗುಣಗಳು ಶಿಕ್ಷಕರಾದವರಿಗೆ ಸಾರ್ಥಕ ಭಾವ ಉಂಟುಮಾಡುತ್ತದೆ ಎಂದರು.</p>.<p>ಈ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ.ಭಟ್, ಹಳೆ ವಿದ್ಯಾರ್ಥಿ ಪಿ.ಕೃಷ್ಣಮೂರ್ತಿ ಭಟ್, ಶಿಕ್ಷಕ ಎಚ್.ಎನ್.ಶೃಂಗೇಶ್ವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>