<p><strong>ಕಾರ್ಕಳ (ಉಡುಪಿ):</strong> ತಾಲ್ಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಕೊಟ್ಟಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ, ಕಂಬಳದ ಎರಡು ಕೋಣಗಳು ಮೃತಪಟ್ಟಿವೆ.</p>.<p>ಬೇಲಾಡಿ ಬಾವಾ ಅಶೋಕ್ ಶೆಟ್ಟಿ ಅವರ ಅಪ್ಪು ಮತ್ತು ತೋನ್ಸೆ ಎಂಬ ಹೆಸರಿನ ಕೋಣಗಳು ಸುಟ್ಟು ಕರಕಲಾಗಿವೆ. ಬೆಂಕಿ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಕೋಣಗಳ ಚಾಕರಿ ಮಾಡುವವರೂ ಮನೆಗೆ ತೆರಳಿದ್ದರಿಂದ ಇದು ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದೆ.</p>.<p>ಕೊಟ್ಟಿಗೆಗೆ ತಾಗಿಕೊಂಡಿದ್ದ ಭತ್ತದ ಬಣವೆಯು ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆಯಿಂದ ಕೋಣಗಳು ಮೃತಪಟ್ಟಿವೆ.</p>.<p>ಕಂಬಳದ ಕೋಣಗಳನ್ನು ಕಟ್ಟಿರುವ ಕೊಟ್ಟಿಗೆಯ ಮೇಲ್ಚಾವಣಿಯಲ್ಲಿ ಮರದ ಹಲಗೆಗಳನ್ನು ಜೋಡಿಸಿ ಅದರಲ್ಲಿ ಹುಲ್ಲು ದಾಸ್ತಾನು ಮಾಡಲಾಗಿತ್ತು. ಬೆಂಕಿ ಹೊತ್ತಿಕೊಂಡಾಗ ಹುಲ್ಲಿನ ದಾಸ್ತಾನು ಪೂರ್ಣವಾಗಿ ಸುಟ್ಟು, ಅದರ ಅಡಿಯಲ್ಲಿ ಕಟ್ಟಿದ ಒಂದು ಕೋಣದ ಮೈಮೇಲೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಈ ಎರಡು ಕೋಣಗಳು 2022- 23ರ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿತ್ತು.<br /><br />ಕೊಟ್ಟಿಗೆಯ ಹಿಂಭಾಗದಲ್ಲಿ ಹೊಂಡ ತೋಡಿ ಅವುಗಳಿಗೆ ಹೊಸ ವಸ್ತ್ರ ತೊಡಿಸಿ ಹೂಮಾಲೆ ಅರ್ಪಿಸಿ ಅಂತ್ಯಕ್ರಿಯೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ (ಉಡುಪಿ):</strong> ತಾಲ್ಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಕೊಟ್ಟಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ, ಕಂಬಳದ ಎರಡು ಕೋಣಗಳು ಮೃತಪಟ್ಟಿವೆ.</p>.<p>ಬೇಲಾಡಿ ಬಾವಾ ಅಶೋಕ್ ಶೆಟ್ಟಿ ಅವರ ಅಪ್ಪು ಮತ್ತು ತೋನ್ಸೆ ಎಂಬ ಹೆಸರಿನ ಕೋಣಗಳು ಸುಟ್ಟು ಕರಕಲಾಗಿವೆ. ಬೆಂಕಿ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಕೋಣಗಳ ಚಾಕರಿ ಮಾಡುವವರೂ ಮನೆಗೆ ತೆರಳಿದ್ದರಿಂದ ಇದು ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದೆ.</p>.<p>ಕೊಟ್ಟಿಗೆಗೆ ತಾಗಿಕೊಂಡಿದ್ದ ಭತ್ತದ ಬಣವೆಯು ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆಯಿಂದ ಕೋಣಗಳು ಮೃತಪಟ್ಟಿವೆ.</p>.<p>ಕಂಬಳದ ಕೋಣಗಳನ್ನು ಕಟ್ಟಿರುವ ಕೊಟ್ಟಿಗೆಯ ಮೇಲ್ಚಾವಣಿಯಲ್ಲಿ ಮರದ ಹಲಗೆಗಳನ್ನು ಜೋಡಿಸಿ ಅದರಲ್ಲಿ ಹುಲ್ಲು ದಾಸ್ತಾನು ಮಾಡಲಾಗಿತ್ತು. ಬೆಂಕಿ ಹೊತ್ತಿಕೊಂಡಾಗ ಹುಲ್ಲಿನ ದಾಸ್ತಾನು ಪೂರ್ಣವಾಗಿ ಸುಟ್ಟು, ಅದರ ಅಡಿಯಲ್ಲಿ ಕಟ್ಟಿದ ಒಂದು ಕೋಣದ ಮೈಮೇಲೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಈ ಎರಡು ಕೋಣಗಳು 2022- 23ರ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿತ್ತು.<br /><br />ಕೊಟ್ಟಿಗೆಯ ಹಿಂಭಾಗದಲ್ಲಿ ಹೊಂಡ ತೋಡಿ ಅವುಗಳಿಗೆ ಹೊಸ ವಸ್ತ್ರ ತೊಡಿಸಿ ಹೂಮಾಲೆ ಅರ್ಪಿಸಿ ಅಂತ್ಯಕ್ರಿಯೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>