ಉಡುಪಿ: ರಾಜ್ಯ ಸರ್ಕಾರ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಿಂದ ಕೊಡಮಾಡುವ 2019–20ನೇ ಸಾಲಿನ 'ಕನಕ ಯುವ ಪುರಸ್ಕಾರ'ಕ್ಕೆ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ.
ಪುರಸ್ಕಾರ ₹ 50,000 ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಿ.3ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕನಕ ಜಯಂತಿಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.