<p>ಕಾರ್ಕಳ: ಕಾರ್ಕಳ– ಬೆಳ್ಮಣ್– ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ರಾಜ್ಯ ಸರ್ಕಾರ ಟೋಲ್ ಸಂಗ್ರಹ ಆದೇಶದ ವಿರುದ್ಧ ಹೋರಾಟದ ಪೂರ್ವಭಾವಿ ಸಭೆ ಬಿಜೆಪಿಯ ವಿಕಾಸ ಕಚೇರಿಯಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳ ಪ್ರಮುಖರೊಂದಿಗೆ ಬುಧವಾರ ನಡೆಯಿತು.</p>.<p>ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ಆದೇಶ ಮಾಡಿರುವುದನ್ನು ಬಿಜೆಪಿ ವಿರೋಧಿಸುತ್ತದೆ, ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸುತ್ತದೆ. ಈ ಬಗ್ಗೆ 24ರಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದಲ್ಲಿ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿಯ ಸಾರ್ವಜನಿಕ ಪ್ರತಿಭಟನೆಗೆ ಪ್ರತಿ ಗ್ರಾಮದಿಂದ ಒಂದು ಬಸ್ ಮೂಲಕ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಲಾಗುವುದು. ಕಾರ್ಕಳದಿಂದ ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವರು ಎಂದು ತಿಳಿಸಿದರು.</p>.<p>ಬಿಜೆಪಿ ಪ್ರಮುಖರಾದ ಮಹಾವೀರ ಹೆಗ್ಡೆ, ರೇಶ್ಮಾ ಉದಯ್ ಶೆಟ್ಟಿ, ಬೋಳ ಸತೀಶ್ ಪೂಜಾರಿ, ಪ್ರವೀಣ್ ಸಾಲ್ಯಾನ್, ಜಯರಾಮ್ ಸಾಲ್ಯಾನ್, ದಯಾನಂದ ಹೆಗ್ಡೆ ಕಡ್ತಲ, ಹರ್ಷವರ್ಧನ್ ನಿಟ್ಟೆ, ದೇವೇಂದ್ರ ಶೆಟ್ಟಿ, ಅನಂತಕೃಷ್ಣ ಶೆಣೈ, ಸೂರ್ಯಕಾಂತ್ ಶೆಟ್ಟಿ, ಸರ್ವಜ್ಞ ತಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಕಳ: ಕಾರ್ಕಳ– ಬೆಳ್ಮಣ್– ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ರಾಜ್ಯ ಸರ್ಕಾರ ಟೋಲ್ ಸಂಗ್ರಹ ಆದೇಶದ ವಿರುದ್ಧ ಹೋರಾಟದ ಪೂರ್ವಭಾವಿ ಸಭೆ ಬಿಜೆಪಿಯ ವಿಕಾಸ ಕಚೇರಿಯಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮಗಳ ಪ್ರಮುಖರೊಂದಿಗೆ ಬುಧವಾರ ನಡೆಯಿತು.</p>.<p>ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ಆದೇಶ ಮಾಡಿರುವುದನ್ನು ಬಿಜೆಪಿ ವಿರೋಧಿಸುತ್ತದೆ, ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸುತ್ತದೆ. ಈ ಬಗ್ಗೆ 24ರಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದಲ್ಲಿ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿಯ ಸಾರ್ವಜನಿಕ ಪ್ರತಿಭಟನೆಗೆ ಪ್ರತಿ ಗ್ರಾಮದಿಂದ ಒಂದು ಬಸ್ ಮೂಲಕ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಲಾಗುವುದು. ಕಾರ್ಕಳದಿಂದ ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವರು ಎಂದು ತಿಳಿಸಿದರು.</p>.<p>ಬಿಜೆಪಿ ಪ್ರಮುಖರಾದ ಮಹಾವೀರ ಹೆಗ್ಡೆ, ರೇಶ್ಮಾ ಉದಯ್ ಶೆಟ್ಟಿ, ಬೋಳ ಸತೀಶ್ ಪೂಜಾರಿ, ಪ್ರವೀಣ್ ಸಾಲ್ಯಾನ್, ಜಯರಾಮ್ ಸಾಲ್ಯಾನ್, ದಯಾನಂದ ಹೆಗ್ಡೆ ಕಡ್ತಲ, ಹರ್ಷವರ್ಧನ್ ನಿಟ್ಟೆ, ದೇವೇಂದ್ರ ಶೆಟ್ಟಿ, ಅನಂತಕೃಷ್ಣ ಶೆಣೈ, ಸೂರ್ಯಕಾಂತ್ ಶೆಟ್ಟಿ, ಸರ್ವಜ್ಞ ತಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>