<p><strong>ಉಡುಪಿ</strong>: ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಅತಿದೊಡ್ಡ ಸ್ವಾಯತ್ತ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಅವಿಸ್ಮರಣೀಯ ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕ, ಯಕ್ಷಗಾನ ಕೇಂದ್ರ ಇಂದ್ರಾಳಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಸಾಪ ಸ್ಥಾಪನಾ ದಿನಾಚರಣೆ ಹಾಗೂ ಯಕ್ಷ ಪ್ರೇಮಿ ನಾರಾಯಣ ಸಂಸ್ಮರಣಾರ್ಥ ನೀಡುವ ದತ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಭಾಷೆಯ ಜೊತೆಗೆ ಏಕೀಕರಣಕ್ಕೆ ಒತ್ತು ನೀಡಿದ ಪರಿಣಾಮ ಪ್ರಸ್ತುತ ಉತ್ತಮ ನಾಡನ್ನು ಕಾಣುವಂತಾಗಿದೆ. ಸಾಹಿತ್ಯ ಸಮ್ಮೇಳನಗಳು ನಾಡಿನ ವಿವಿಧ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ತರ ಕೆಲಸ ಮಾಡುತ್ತಿವೆ ಎಂದರು.</p>.<p>ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರದ ಗುರುಗಳಾದ ಕೃಷ್ಣಮೂತಿ೯ ಭಟ್ ಅವರಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಿರಿಯ ನಾಗರಿಕ ವೇದಿಕೆಯ ಅದ್ಯಕ್ಷ ಸಿ.ಎಸ್.ರಾವ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.</p>.<p>ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವ ಅಧ್ಯಕ್ಷ ವಿಶ್ವನಾಥ್ ಶೆಣೈ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ಭಾಗವಹಿಸಿದ್ದರು. ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಪಿ.ರವಿರಾಜ್ ಅಧ್ಯಕ್ಷತೆ ವಹಿಸಿದ್ದರು.</p>.<p>ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಸ್ವಾಗತಿಸಿದರು. ರಾಜೇಶ್ ಭಟ್ ಪಣಿಯಾಡಿ ಅತಿಥಿಗಳನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ಜನರ್ಧನ್ ಕೊಡವೂರ್ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಅತಿದೊಡ್ಡ ಸ್ವಾಯತ್ತ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಅವಿಸ್ಮರಣೀಯ ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕ, ಯಕ್ಷಗಾನ ಕೇಂದ್ರ ಇಂದ್ರಾಳಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಸಾಪ ಸ್ಥಾಪನಾ ದಿನಾಚರಣೆ ಹಾಗೂ ಯಕ್ಷ ಪ್ರೇಮಿ ನಾರಾಯಣ ಸಂಸ್ಮರಣಾರ್ಥ ನೀಡುವ ದತ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಭಾಷೆಯ ಜೊತೆಗೆ ಏಕೀಕರಣಕ್ಕೆ ಒತ್ತು ನೀಡಿದ ಪರಿಣಾಮ ಪ್ರಸ್ತುತ ಉತ್ತಮ ನಾಡನ್ನು ಕಾಣುವಂತಾಗಿದೆ. ಸಾಹಿತ್ಯ ಸಮ್ಮೇಳನಗಳು ನಾಡಿನ ವಿವಿಧ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ತರ ಕೆಲಸ ಮಾಡುತ್ತಿವೆ ಎಂದರು.</p>.<p>ಕಾರ್ಯಕ್ರಮದಲ್ಲಿ ಯಕ್ಷಗಾನ ಕೇಂದ್ರದ ಗುರುಗಳಾದ ಕೃಷ್ಣಮೂತಿ೯ ಭಟ್ ಅವರಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಿರಿಯ ನಾಗರಿಕ ವೇದಿಕೆಯ ಅದ್ಯಕ್ಷ ಸಿ.ಎಸ್.ರಾವ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.</p>.<p>ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವ ಅಧ್ಯಕ್ಷ ವಿಶ್ವನಾಥ್ ಶೆಣೈ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ಭಾಗವಹಿಸಿದ್ದರು. ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಎಚ್.ಪಿ.ರವಿರಾಜ್ ಅಧ್ಯಕ್ಷತೆ ವಹಿಸಿದ್ದರು.</p>.<p>ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಸ್ವಾಗತಿಸಿದರು. ರಾಜೇಶ್ ಭಟ್ ಪಣಿಯಾಡಿ ಅತಿಥಿಗಳನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ಜನರ್ಧನ್ ಕೊಡವೂರ್ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>