<p><strong>ಉಡುಪಿ:</strong> ಕುಲವೆನ್ನದೆ ಮನುಕುಲದ ನಾಡನ್ನು ಕಟ್ಟುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.</p><p>ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸುಕೃತಿ - 2025ರಲ್ಲಿ ಅವರು ಮಾತನಾಡಿದರು.</p><p>ಕುಲ ಕುಲವೆಂದು ಹೊಡೆದಾಡದಿರಿ ಎಂದು ಹೇಳಿರುವ ಕನಕದಾಸರು ಭಕ್ತಿ ಮೆರೆದ ಸ್ಥಳವಾದ ಇಲ್ಲಿ ಎಲ್ಲಕ್ಕಿಂತ ಮುಖ್ಯವಾಗಿರುವುದು ಮನುಕುಲ ಎಂಬುದನ್ನು ತೋರಿಸಿಕೊಡಲಾಗಿದೆ ಎಂದರು.</p><p>ಸಮ್ಮೇಳನಕ್ಕೆ ಚಾಲನೆ ನೀಡಿದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಮಾತನಾಡಿ, ಆತ್ಮ ವಿಕಾಸಕ್ಕೆ ಸಾಹಿತ್ಯ ಚಿಂತನೆ ಅತ್ಯಗತ್ಯ ಎಂದು ಹೇಳಿದರು.</p><p>ಸಮ್ಮೇಳನಾಧ್ಯಕ್ಷ ಪಾದೆಕಲ್ಲು ವಿಷ್ಣು ಭಟ್ ಮಾತನಾಡಿ, ನಾವೇ ನಮ್ಮತನವನ್ನು ಬಿಟ್ಟಿದ್ದೇವೆ. ನಮ್ಮ ಭಾಷೆಯನ್ನು ಬಳಸುವ ಮನಸ್ಸು ನಮ್ಮಲ್ಲಿ ಇಲ್ಲವಾಗಿದೆ ಎಂದರು.</p><p>ಯುವ ಜನರಲ್ಲಿ ಸಾಹಿತ್ಯದ ಪ್ರೇಮ ಬೆಳೆಸುವ ನಿಟ್ಟಿನಲ್ಲಿ ನಾವು ಏನು ಮಾಡಿದ್ದೇವೆ ಎಂಬುದರ ಬಗ್ಗೆ ಚಿಂತನೆ ನಡೆಸುವ ಅಗತ್ಯ ಇದೆ ಎಂದು ಪ್ರತಿವಾದಿಸಿದರು.</p><p>ಕ.ಸಾ.ಪ. ಜಿಲ್ಲಾ ಘಟಕ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕುಲವೆನ್ನದೆ ಮನುಕುಲದ ನಾಡನ್ನು ಕಟ್ಟುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.</p><p>ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ನಡೆದ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸುಕೃತಿ - 2025ರಲ್ಲಿ ಅವರು ಮಾತನಾಡಿದರು.</p><p>ಕುಲ ಕುಲವೆಂದು ಹೊಡೆದಾಡದಿರಿ ಎಂದು ಹೇಳಿರುವ ಕನಕದಾಸರು ಭಕ್ತಿ ಮೆರೆದ ಸ್ಥಳವಾದ ಇಲ್ಲಿ ಎಲ್ಲಕ್ಕಿಂತ ಮುಖ್ಯವಾಗಿರುವುದು ಮನುಕುಲ ಎಂಬುದನ್ನು ತೋರಿಸಿಕೊಡಲಾಗಿದೆ ಎಂದರು.</p><p>ಸಮ್ಮೇಳನಕ್ಕೆ ಚಾಲನೆ ನೀಡಿದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಮಾತನಾಡಿ, ಆತ್ಮ ವಿಕಾಸಕ್ಕೆ ಸಾಹಿತ್ಯ ಚಿಂತನೆ ಅತ್ಯಗತ್ಯ ಎಂದು ಹೇಳಿದರು.</p><p>ಸಮ್ಮೇಳನಾಧ್ಯಕ್ಷ ಪಾದೆಕಲ್ಲು ವಿಷ್ಣು ಭಟ್ ಮಾತನಾಡಿ, ನಾವೇ ನಮ್ಮತನವನ್ನು ಬಿಟ್ಟಿದ್ದೇವೆ. ನಮ್ಮ ಭಾಷೆಯನ್ನು ಬಳಸುವ ಮನಸ್ಸು ನಮ್ಮಲ್ಲಿ ಇಲ್ಲವಾಗಿದೆ ಎಂದರು.</p><p>ಯುವ ಜನರಲ್ಲಿ ಸಾಹಿತ್ಯದ ಪ್ರೇಮ ಬೆಳೆಸುವ ನಿಟ್ಟಿನಲ್ಲಿ ನಾವು ಏನು ಮಾಡಿದ್ದೇವೆ ಎಂಬುದರ ಬಗ್ಗೆ ಚಿಂತನೆ ನಡೆಸುವ ಅಗತ್ಯ ಇದೆ ಎಂದು ಪ್ರತಿವಾದಿಸಿದರು.</p><p>ಕ.ಸಾ.ಪ. ಜಿಲ್ಲಾ ಘಟಕ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>