ಉಡುಪಿ ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಸತೀಶ್ ಕುಮಾರ್ ಕೆಮ್ಮಣ್ಣು ಅವರ ಹೆಸರಿನ ‘ಗಮಕ ಕಲಾ ಪ್ರವಚನ’ ದತ್ತಿ ಪ್ರಶಸ್ತಿಗೆ ಗಮಕ ವಾಚನಕಾರ ಡಾ.ರಾಘವೇಂದ್ರ ರಾವ್ ಪಡುಬಿದ್ರಿ, ಉಡುಪಿಯ ಗಮಕಿ ಯಾಮಿನಿ ಭಟ್ ಅವರು ಸ್ಥಾಪಿಸಿದ ‘ಗಮಕ ಕಲಾ ವಾಚನ’ ದತ್ತಿ ಪ್ರಶಸ್ತಿಗೆ ಮಂಜುಳಾ ಸುಬ್ರಹ್ಮಣ್ಯ ಭಟ್ ಮಂಚಿ, ಕಾರ್ಕಳದ ಶಿಲ್ಪಿ ಕೆ. ಶಾಮರಾಯ ಆಚಾರ್ಯ ಅವರ ಹೆಸರಿನ ‘ಶಿಲ್ಪಕಲಾ’ ದತ್ತಿ ಪ್ರಶಸ್ತಿಗೆ ಶಿಲ್ಪಿ ಬಿ.ಎಸ್.ಭಾಸ್ಕರ ಆಚಾರ್ಯ ಕಾರ್ಕಳ ಅವರನ್ನು ಆಯ್ಕೆ ಮಾಡಲಾಗಿದೆ.