<p>ಕಾಪು (ಪಡುಬಿದ್ರಿ): ಕಾಪು ಪುರಸಭಾ ವ್ಯಾಪ್ತಿಯಲ್ಲಿ ಅನಧಿಕೃತ ರೆಸಾರ್ಟ್, ಹೋಂಸ್ಟೇಗಳು ತಲೆಯೆತ್ತಿದ್ದು, ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಪು ಪುರಸಭಾ ಸದಸ್ಯರು ಮಂಗಳವಾರ ಆಗ್ರಹಿಸಿದರು.</p>.<p>ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿರಣ್ ಆಳ್ವ ಮಾತನಾಡಿ, ನಾಯಿ ಕೊಡೆಗಳಂತೆ ರೆಸಾರ್ಟ್-ಹೋಮ್ ಸ್ಟೇಗಳು ತೆರೆದಿವೆ. ಈ ಬಗ್ಗೆ ಪುರಸಭೆಯು ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಿದೆಯೇ? ಮೆಸ್ಕಾಂ ವಿದ್ಯುತ್ ಸಂಪರ್ಕ ನೀಡುವಾಗ ಎನ್ಒಸಿ ಪಡೆದಕೊಂಡಿವೆಯೇ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಪುರಸಭೆ ವ್ಯಾಪ್ತಿಯಲ್ಲಿ 29 ರೆಸಾರ್ಟ್ - ಹೋಮ್ ಸ್ಟೇಗಳಿದ್ದು, ಅದರಲ್ಲಿ ನಾಲ್ಕು ಅನಧಿಕೃತ ಹೋಮ್ ಸ್ಟೇಗಳನ್ನು ಗುರುತಿಸಲಾಗಿದೆ. ಉಳಿದವುಗಳನ್ನು ಸರ್ವೆ ಮಾಡಿ ಪತ್ತೆ ಹಚ್ಚಲಾಗುವುದು ಎಂದರು.</p>.<p>ಸದಸ್ಯರಾದ ಫರ್ಜಾನ, ಬಾಬಣ್ಣ ನಾಯಕ್, ಅಮೀರ್ ಅನಧಿಕೃತ ಕಟ್ಟಡ ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಪುರಸಭೆ ವ್ಯಾಪ್ತಿಯಲ್ಲಿ 40 ಕಟ್ಟಡಗಳಲ್ಲಿ 384 ಮನೆಗಳಿವೆ. ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಅಧಿಕಾರಿ ಶಶಿಕಲಾ ಭರವಸೆ ನೀಡಿದರು.</p>.<p>ಪೊಲಿಪು ವಾರ್ಡ್ನಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿ ನಡೆಸದೇ ಇರುವ ಬಗ್ಗೆ ವಾರ್ಡ್ ಸದಸ್ಯೆ ರಾಧಿಕಾ ಸುವರ್ಣ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರದಲ್ಲಿ ಸದಸ್ಯರೆಲ್ಲರೂ ದನಿಗೂಡಿಸಿ ಅದು ಸರ್ಕಾರಿ ಜಾಗವೆಂದು ಗುರುತಿಸಿದ್ದು ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿದರು. ಪರಿಶೀಲನೆ ನಡೆಸಿ ಶೀಘ್ರ ಕಾಮಗಾರಿ ನಡೆಸುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚಿಸಿದರು.</p>.<p>ಪಾರ್ಕಿಂಗ್ಗೆ ಜಂಟಿ ಸರ್ವೇ: ಕಾಪು ಪೇಟೆಯ ಟ್ರಾಫಿಕ್ ನಿರ್ವಹಣೆ, ಪಾರ್ಕಿಂಗ್ ಒತ್ತಡ ಕಡಿಮೆ ಮಾಡಲು ಪಿಡಬ್ಲ್ಯುಡಿ ಮತ್ತು ಕಾಪು ಪುರಸಭೆ ವತಿಯಿಂದ ಜಂಟಿ ಸರ್ವೆ ನಡೆಸಲಾಗಿದೆ. ಈ ಬಗ್ಗೆ ಮ್ಯಾಪಿಂಗ್ ನಡೆಸಿ, ಪುರಸಭೆ, ಪಿಡಬ್ಲ್ಯುಡಿ, ಪೊಲೀಸ್, ಆರ್ಟಿಒ ಸೇರಿ ಮುಂದಿನ ಕ್ರಮ ವಹಿಸಲಾಗು ವುದು ಎಂದು ನೀಲಕಂಠ ಮೇಸ್ತ ಹೇಳಿದರು.</p>.<p>ಕಾಪು ಪೇಟೆಯಲ್ಲಿ ಸರ್ಕಾರಿ ಜಾಗದಲ್ಲಿ ಪಾರ್ಕಿಂಗ್ ನಿರಾಕರಿಸುವ ಅಂಗಡಿ ಮಾಲೀಕರು, ಕಟ್ಟಡ ನಿರ್ಮಿಸುವವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಶೈಲೇಶ್ ಅಮೀನ್, ಅನಿಲ್ ಕುಮಾರ್, ಫರ್ಜಾನ, ಶೋಭಾ ಬಂಗೇರ ಪ್ರಶ್ನಿಸಿದರು.</p>.<p>ಸರ್ವರ್ನ ಕೊರತೆಯಿಂದ ಪಡಿತರ ಪಡೆಯಲು ಸಾಧ್ಯವಾಗದೇ ಜನ ಹಿಂತೆರಳುವಂತಾಗಿದೆ. ಇಂತಹ ಸಮಸ್ಯೆ ಆಲಿಸಲು ಆಹಾರ ಇಲಾಖೆಯ ಅಧಿಕಾರಿಗಳು ಸತತವಾಗಿ ಗೈರು ಹಾಜರಾಗುತ್ತಿರುವುದಕ್ಕೆ ಸದಸ್ಯರು ಒಕ್ಕೊರಲಿನಿಂದ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರ ಬರೆಯುವುದಾಗಿ ಮುಖ್ಯಾಧಿಕಾರಿ ಭರವಸೆ ನೀಡಿದರು.</p>.<p>ಮಳೆ ನೀರು ಹರಿಯುವ ಚರಂಡಿಗೆ ಕೊಳಚೆ ನೀರು ಬಿಡುತ್ತಿದ್ದಾರೆ. ಈ ಬಗ್ಗೆ ಕ್ರಮ ವಹಿಸುವಂತೆ ಸದಸ್ಯರು ಒತ್ತಾಯಿಸಿದರು. ಪರಿಶೀಲನೆ ನಡೆಸಿ ಕ್ರಮ ವಹಿಸುವ ಭರವಸೆ ನೀಡಿದರು. ಬೀದಿ ನಾಯಿಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು ಎಂದರು.</p>.<p>ಕೊಳಚೆ ನೀರು ಬಿಡುವವರಿಗೆ ನೋಟಿಸ್ ಜಾರಿ ಮಾಡಿ, ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ವಹಿಸ ಲಾಗುವುದು ಎಂದು ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಭರವಸೆ ನೀಡಿದರು.</p>.<p>ಕಾಪು ಸರ್ವಿಸ್ ರಸ್ತೆಯಲ್ಲಿ ಎಕ್ಸ್ಪ್ರೆಸ್ ಬಸ್ ಸಂಚಾರಕ್ಕೆ ಅವಕಾಶ ನೀಡದಂತೆ ನಿರ್ಣಯ ಮಾಡಿ ಕಳುಹಿಸಿಕೊಡಲಾಗಿದ್ದು ಪುರಸಭೆ ನಿರ್ಣಯಗಳಿಗೆ ಜಿಲ್ಲಾಡಳಿತ ಬೆಲೆ ನೀಡುತ್ತಿಲ್ಲ ಎಂದು ಸದಸ್ಯರು ದೂರಿದರು. ಸಾಮಾನ್ಯ ಸಭೆಗೆ ಗೌರವ ನೀಡುವುದು ಎಲ್ಲಾ ಇಲಾಖೆಗಳ ಕರ್ತವ್ಯವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಬಳಿ ಮಾತುಕತೆ ನಡೆಸುವುದಾಗಿ ಶಾಸಕ ಸುರೇಶ್ ಶೆಟ್ಟಿ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-962120026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಪು (ಪಡುಬಿದ್ರಿ): ಕಾಪು ಪುರಸಭಾ ವ್ಯಾಪ್ತಿಯಲ್ಲಿ ಅನಧಿಕೃತ ರೆಸಾರ್ಟ್, ಹೋಂಸ್ಟೇಗಳು ತಲೆಯೆತ್ತಿದ್ದು, ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಪು ಪುರಸಭಾ ಸದಸ್ಯರು ಮಂಗಳವಾರ ಆಗ್ರಹಿಸಿದರು.</p>.<p>ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿರಣ್ ಆಳ್ವ ಮಾತನಾಡಿ, ನಾಯಿ ಕೊಡೆಗಳಂತೆ ರೆಸಾರ್ಟ್-ಹೋಮ್ ಸ್ಟೇಗಳು ತೆರೆದಿವೆ. ಈ ಬಗ್ಗೆ ಪುರಸಭೆಯು ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಿದೆಯೇ? ಮೆಸ್ಕಾಂ ವಿದ್ಯುತ್ ಸಂಪರ್ಕ ನೀಡುವಾಗ ಎನ್ಒಸಿ ಪಡೆದಕೊಂಡಿವೆಯೇ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಪುರಸಭೆ ವ್ಯಾಪ್ತಿಯಲ್ಲಿ 29 ರೆಸಾರ್ಟ್ - ಹೋಮ್ ಸ್ಟೇಗಳಿದ್ದು, ಅದರಲ್ಲಿ ನಾಲ್ಕು ಅನಧಿಕೃತ ಹೋಮ್ ಸ್ಟೇಗಳನ್ನು ಗುರುತಿಸಲಾಗಿದೆ. ಉಳಿದವುಗಳನ್ನು ಸರ್ವೆ ಮಾಡಿ ಪತ್ತೆ ಹಚ್ಚಲಾಗುವುದು ಎಂದರು.</p>.<p>ಸದಸ್ಯರಾದ ಫರ್ಜಾನ, ಬಾಬಣ್ಣ ನಾಯಕ್, ಅಮೀರ್ ಅನಧಿಕೃತ ಕಟ್ಟಡ ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಪುರಸಭೆ ವ್ಯಾಪ್ತಿಯಲ್ಲಿ 40 ಕಟ್ಟಡಗಳಲ್ಲಿ 384 ಮನೆಗಳಿವೆ. ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಅಧಿಕಾರಿ ಶಶಿಕಲಾ ಭರವಸೆ ನೀಡಿದರು.</p>.<p>ಪೊಲಿಪು ವಾರ್ಡ್ನಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿ ನಡೆಸದೇ ಇರುವ ಬಗ್ಗೆ ವಾರ್ಡ್ ಸದಸ್ಯೆ ರಾಧಿಕಾ ಸುವರ್ಣ ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರದಲ್ಲಿ ಸದಸ್ಯರೆಲ್ಲರೂ ದನಿಗೂಡಿಸಿ ಅದು ಸರ್ಕಾರಿ ಜಾಗವೆಂದು ಗುರುತಿಸಿದ್ದು ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿದರು. ಪರಿಶೀಲನೆ ನಡೆಸಿ ಶೀಘ್ರ ಕಾಮಗಾರಿ ನಡೆಸುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚಿಸಿದರು.</p>.<p>ಪಾರ್ಕಿಂಗ್ಗೆ ಜಂಟಿ ಸರ್ವೇ: ಕಾಪು ಪೇಟೆಯ ಟ್ರಾಫಿಕ್ ನಿರ್ವಹಣೆ, ಪಾರ್ಕಿಂಗ್ ಒತ್ತಡ ಕಡಿಮೆ ಮಾಡಲು ಪಿಡಬ್ಲ್ಯುಡಿ ಮತ್ತು ಕಾಪು ಪುರಸಭೆ ವತಿಯಿಂದ ಜಂಟಿ ಸರ್ವೆ ನಡೆಸಲಾಗಿದೆ. ಈ ಬಗ್ಗೆ ಮ್ಯಾಪಿಂಗ್ ನಡೆಸಿ, ಪುರಸಭೆ, ಪಿಡಬ್ಲ್ಯುಡಿ, ಪೊಲೀಸ್, ಆರ್ಟಿಒ ಸೇರಿ ಮುಂದಿನ ಕ್ರಮ ವಹಿಸಲಾಗು ವುದು ಎಂದು ನೀಲಕಂಠ ಮೇಸ್ತ ಹೇಳಿದರು.</p>.<p>ಕಾಪು ಪೇಟೆಯಲ್ಲಿ ಸರ್ಕಾರಿ ಜಾಗದಲ್ಲಿ ಪಾರ್ಕಿಂಗ್ ನಿರಾಕರಿಸುವ ಅಂಗಡಿ ಮಾಲೀಕರು, ಕಟ್ಟಡ ನಿರ್ಮಿಸುವವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಶೈಲೇಶ್ ಅಮೀನ್, ಅನಿಲ್ ಕುಮಾರ್, ಫರ್ಜಾನ, ಶೋಭಾ ಬಂಗೇರ ಪ್ರಶ್ನಿಸಿದರು.</p>.<p>ಸರ್ವರ್ನ ಕೊರತೆಯಿಂದ ಪಡಿತರ ಪಡೆಯಲು ಸಾಧ್ಯವಾಗದೇ ಜನ ಹಿಂತೆರಳುವಂತಾಗಿದೆ. ಇಂತಹ ಸಮಸ್ಯೆ ಆಲಿಸಲು ಆಹಾರ ಇಲಾಖೆಯ ಅಧಿಕಾರಿಗಳು ಸತತವಾಗಿ ಗೈರು ಹಾಜರಾಗುತ್ತಿರುವುದಕ್ಕೆ ಸದಸ್ಯರು ಒಕ್ಕೊರಲಿನಿಂದ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರ ಬರೆಯುವುದಾಗಿ ಮುಖ್ಯಾಧಿಕಾರಿ ಭರವಸೆ ನೀಡಿದರು.</p>.<p>ಮಳೆ ನೀರು ಹರಿಯುವ ಚರಂಡಿಗೆ ಕೊಳಚೆ ನೀರು ಬಿಡುತ್ತಿದ್ದಾರೆ. ಈ ಬಗ್ಗೆ ಕ್ರಮ ವಹಿಸುವಂತೆ ಸದಸ್ಯರು ಒತ್ತಾಯಿಸಿದರು. ಪರಿಶೀಲನೆ ನಡೆಸಿ ಕ್ರಮ ವಹಿಸುವ ಭರವಸೆ ನೀಡಿದರು. ಬೀದಿ ನಾಯಿಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು ಎಂದರು.</p>.<p>ಕೊಳಚೆ ನೀರು ಬಿಡುವವರಿಗೆ ನೋಟಿಸ್ ಜಾರಿ ಮಾಡಿ, ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ವಹಿಸ ಲಾಗುವುದು ಎಂದು ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಭರವಸೆ ನೀಡಿದರು.</p>.<p>ಕಾಪು ಸರ್ವಿಸ್ ರಸ್ತೆಯಲ್ಲಿ ಎಕ್ಸ್ಪ್ರೆಸ್ ಬಸ್ ಸಂಚಾರಕ್ಕೆ ಅವಕಾಶ ನೀಡದಂತೆ ನಿರ್ಣಯ ಮಾಡಿ ಕಳುಹಿಸಿಕೊಡಲಾಗಿದ್ದು ಪುರಸಭೆ ನಿರ್ಣಯಗಳಿಗೆ ಜಿಲ್ಲಾಡಳಿತ ಬೆಲೆ ನೀಡುತ್ತಿಲ್ಲ ಎಂದು ಸದಸ್ಯರು ದೂರಿದರು. ಸಾಮಾನ್ಯ ಸಭೆಗೆ ಗೌರವ ನೀಡುವುದು ಎಲ್ಲಾ ಇಲಾಖೆಗಳ ಕರ್ತವ್ಯವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಬಳಿ ಮಾತುಕತೆ ನಡೆಸುವುದಾಗಿ ಶಾಸಕ ಸುರೇಶ್ ಶೆಟ್ಟಿ ಭರವಸೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-28-962120026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>