ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸ್ಪರ್ಧಾಕೂಟದಲ್ಲಿ ಲವಲವಿಕೆಯಿಂದ ಪಾಲ್ಗೊಂಡರು. ಹಗ್ಗಜಗ್ಗಾಟ, ನಿಂಬೆಹಣ್ಣು ಚಮಚ, ಗೋಣಿಚೀಲದಲ್ಲಿ ನೆಗೆದಾಟ ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಆಕಾಶಕ್ಕೆ ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿದರು. ಜಿಲ್ಲಾಧಿಕಾರಿ ವಿದ್ಯಾಕುಮಾರಿ, ತಹಶೀಲ್ದಾರ್ ಡಾ.ಪ್ರತಿಭಾ ಆರ್. ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡು ಸ್ಫರ್ಧಾಳುಗಳನ್ನು ಹುರಿದುಂಬಿಸಿದರು.