ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಕಾರಂತರ ಒಡನಾಡಿ ಪಾಂಡೇಶ್ವರ ಚಂದ್ರಶೇಖರ ಚಡಗ ಅವರಿಗೆ ‘ಗೆಳೆಯರ ಬಳಗ ಕಾರಂತ ಪುರಸ್ಕಾರ’ ನೀಡಿ ಗೌರವಿಸಲಾಗುವುದು. ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕಾರಂತ ಭಾವಚಿತ್ರಕ್ಕೆ ಪುಷ್ಪ ನಮನ, ಹಿರಿಯ ಸಾಹಿತಿ ಕುಂದಾಪುರದ ಎ.ಎಸ್.ಎನ್. ಹೆಬ್ಬಾರ್ ಕಾರಂತ ಸಂಸ್ಮರಣೆ ಮಾಡುವರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿ ಆನಂದ್ ಸಿ. ಕುಂದರ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ ಭಾಗವಹಿಸುವರು.