ಬ್ರಹ್ಮಾವರ: ಡಾ.ಕೋಟ ಶಿವರಾಮ ಕಾರಂತರ ಜನ್ಮದಿನದ ಪ್ರಯುಕ್ತ ಸಾಲಿಗ್ರಾಮ ಗೆಳೆಯರ ಬಳಗ ನೀಡುವ ವಾರ್ಷಿಕ ಕಾರಂತ ಪುರಸ್ಕಾರಕ್ಕೆ ಕಾರಂತರ ಒಡನಾಡಿ, ಪ್ರಗತಿಪರ ಚಿಂತಕ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ ಭಾಜನರಾಗಿದ್ದಾರೆ.
ಈ ಪುರಸ್ಕಾರವು ₹ 5ಸಾವಿರ ನಗದು ಹಾಗೂ ಸನ್ಮಾನ ಪತ್ರವನ್ನು ಒಳಗೊಂಡಿದೆ. ಅಕ್ಟೋಬರ್ 11ರಂದು ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ತಿಳಿಸಿದ್ದಾರೆ.