<p><strong>ಕುಂದಾಪುರ:</strong> ರಾಜ್ಯದ ಜಿಡಿಪಿ ಬೆಳವಣಿಗೆಗೆ ಬೆಂಗಳೂರು ಹೊರತು ಪಡಿಸಿದರೆ ಅತಿ ಹೆಚ್ಚು ಕೊಡುಗೆ ಇರುವುದು ಕರಾವಳಿ ಜಿಲ್ಲೆಗಳಿಂದ ಎಂದು ಕಿಯೊನಿಕ್ಸ್ ಅಧ್ಯಕ್ಷ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಕೋಡಿಯ ಬ್ಯಾರಿಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಸಂಸ್ಥಾಪಕರ ದಿನಾಚರಣೆ ಹಾಗೂ 120 ನೇ ವರ್ಷಾಚರಣೆಯ ಬ್ಯಾರಿಸ್ ಉತ್ಸವದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>ಜಿಡಿಪಿಯಲ್ಲಿ ಶೇ.40ರಷ್ಟು ಬೆಂಗಳೂರಿನ ಕೊಡುಗೆಯಾದರೆ, ಬಾಕಿ ಉಳಿದ ಜಿಲ್ಲೆಗಳದ್ದು ಶೇ.1ರಷ್ಟು ಪಾಲಿದೆ. ಶೇ.4-5 ರಷ್ಟು ಆರ್ಥಿಕತೆ ಈ ಭಾಗದ್ದು. ರಾಜ್ಯದಲ್ಲಿ ಅತಿ ಉದ್ದದ ಕರಾವಳಿ ತೀರವಿದೆ. ಸಿಆರ್ಝಡ್ ನಂತಹ ಅಡೆತಡೆ ನಿವಾರಣೆ ಸೇರಿದಂತೆ ಕರಾವಳಿಗೆ ಪ್ರತ್ಯೇಕ ನೀತಿ ರೂಪಿಸಲು, ಕರಾವಳಿ ಅಭಿವೃದ್ಧಿಗೆ ಪೂರಕವಾಗಿ ‘ಸಿಂಗಲ್ ವಿಂಡೊ ಸಿಸ್ಟಂ’ ಮಾಡಲು ಸರ್ಕಾರ ಚಿಂತಿಸುತ್ತಿದೆ ಎಂದರು.</p>.<p>ಶಾಸಕ ಎ.ಕಿರಣ್ಕುಮಾರ ಕೊಡ್ಗಿ ಮಾತನಾಡಿ, ಬ್ಯಾರಿಸ್ ಶಿಕ್ಷಣ ಸಂಸ್ಥೆಗಳು ಇಂದು ಸದೃಢವಾಗಿ ಬೆಳೆದಿದ್ದು, 5 ಸಾವಿರಕ್ಕೂ ಮಿಕ್ಕಿ ಮಕ್ಕಳಿಗೆ ಗುಣಮಟ್ಟ ಹಾಗೂ ಮೌಲ್ಯಧಾರಿತ ಶಿಕ್ಷಣ ನೀಡುತ್ತಿದೆ ಕೇರಳ, ಗೋವಾದಲ್ಲಿ ಸಿಆರ್ಝಡ್ ನಿಯಮ 50 ಮೀ. ಇದ್ದರೆ, ನಮ್ಮಲ್ಲಿ 200 ಮೀ. ಇದೆ. ಇದನ್ನು ಸಡಿಲಿಕೆ ಮಾಡುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಕರಾವಳಿಯಲ್ಲಿಯೇ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಲ್ಲಿ ಎಲ್ಲ ಸಾಧಕ- ಬಾಧಕಗಳ ಕುರಿತು ಚರ್ಚೆ ಹಾಗೂ ಸಮಾಲೋಚನೆ ನಡೆಯಲಿದೆ ಎಂದರು.</p>.<p>ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಎಂ.ಎ.ಗಫೂರ್ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಸೋಮಶೇಖರ್ ಉಡುಪ ಅವರನ್ನು ಸನ್ಮಾನಿಸಲಾಯಿತು.</p>.<p>ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರೆಹಮಾನ್ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು. ಉಪ ವಿಭಾಗಾಧಿಕಾರಿ ರಶ್ಮೀ ಎಸ್.ಆರ್., ಸರ್ಕಾರದ ವಿಷನ್ ಗ್ರೂಪ್ ಫಾರ್ ಹೈಯರ್ ಎಜುಕೇಶನ್ ಹಾಗೂ ರಿಸರ್ಚ್ ನ ಅರುಣ್ ಸೀತಾರಾಮ್, ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ಡಾ.ಆಸೀಫ್ ಬ್ಯಾರಿ, ಅಶ್ರಫ್, ಡಾ.ಸಿದ್ದಿಕ್, ಕೋಡಿ ಚಕ್ರಮ್ಮ ದೇವಸ್ಥಾನದ ಅಧ್ಯಕ್ಷ ಗೋಪಾಲ ಪೂಜಾರಿ, ಕೆಎಂಎಫ್ ನ ಮಂಜುನಾಥ್, ಪ್ರಾಂಶುಪಾಲರಾದ ಡಾ.ಪೂರ್ಣಿಮಾ ಶೆಟ್ಟಿ, ಡಾ.ಫಿರ್ದೋಸ್, ಶಬೀನಾ, ಡಾ.ಜಯಶೀಲ ಶೆಟ್ಟಿ, ಜಟ್ಟಪ್ಪ, ಸುಮಿತ್ರಾ ಇದ್ದರು.</p>.<p>ಟ್ರಸ್ಟ್ ಚೇರ್ಮನ್ ಸಯ್ಯದ್ ಮೊಹಮ್ಮದ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕಿ ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ಸ್ವಾತಿ ಮುತ್ತು ಲಮಿಸ್ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ರಾಜ್ಯದ ಜಿಡಿಪಿ ಬೆಳವಣಿಗೆಗೆ ಬೆಂಗಳೂರು ಹೊರತು ಪಡಿಸಿದರೆ ಅತಿ ಹೆಚ್ಚು ಕೊಡುಗೆ ಇರುವುದು ಕರಾವಳಿ ಜಿಲ್ಲೆಗಳಿಂದ ಎಂದು ಕಿಯೊನಿಕ್ಸ್ ಅಧ್ಯಕ್ಷ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಕೋಡಿಯ ಬ್ಯಾರಿಸ್ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಸಂಸ್ಥಾಪಕರ ದಿನಾಚರಣೆ ಹಾಗೂ 120 ನೇ ವರ್ಷಾಚರಣೆಯ ಬ್ಯಾರಿಸ್ ಉತ್ಸವದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.</p>.<p>ಜಿಡಿಪಿಯಲ್ಲಿ ಶೇ.40ರಷ್ಟು ಬೆಂಗಳೂರಿನ ಕೊಡುಗೆಯಾದರೆ, ಬಾಕಿ ಉಳಿದ ಜಿಲ್ಲೆಗಳದ್ದು ಶೇ.1ರಷ್ಟು ಪಾಲಿದೆ. ಶೇ.4-5 ರಷ್ಟು ಆರ್ಥಿಕತೆ ಈ ಭಾಗದ್ದು. ರಾಜ್ಯದಲ್ಲಿ ಅತಿ ಉದ್ದದ ಕರಾವಳಿ ತೀರವಿದೆ. ಸಿಆರ್ಝಡ್ ನಂತಹ ಅಡೆತಡೆ ನಿವಾರಣೆ ಸೇರಿದಂತೆ ಕರಾವಳಿಗೆ ಪ್ರತ್ಯೇಕ ನೀತಿ ರೂಪಿಸಲು, ಕರಾವಳಿ ಅಭಿವೃದ್ಧಿಗೆ ಪೂರಕವಾಗಿ ‘ಸಿಂಗಲ್ ವಿಂಡೊ ಸಿಸ್ಟಂ’ ಮಾಡಲು ಸರ್ಕಾರ ಚಿಂತಿಸುತ್ತಿದೆ ಎಂದರು.</p>.<p>ಶಾಸಕ ಎ.ಕಿರಣ್ಕುಮಾರ ಕೊಡ್ಗಿ ಮಾತನಾಡಿ, ಬ್ಯಾರಿಸ್ ಶಿಕ್ಷಣ ಸಂಸ್ಥೆಗಳು ಇಂದು ಸದೃಢವಾಗಿ ಬೆಳೆದಿದ್ದು, 5 ಸಾವಿರಕ್ಕೂ ಮಿಕ್ಕಿ ಮಕ್ಕಳಿಗೆ ಗುಣಮಟ್ಟ ಹಾಗೂ ಮೌಲ್ಯಧಾರಿತ ಶಿಕ್ಷಣ ನೀಡುತ್ತಿದೆ ಕೇರಳ, ಗೋವಾದಲ್ಲಿ ಸಿಆರ್ಝಡ್ ನಿಯಮ 50 ಮೀ. ಇದ್ದರೆ, ನಮ್ಮಲ್ಲಿ 200 ಮೀ. ಇದೆ. ಇದನ್ನು ಸಡಿಲಿಕೆ ಮಾಡುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಕರಾವಳಿಯಲ್ಲಿಯೇ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಲ್ಲಿ ಎಲ್ಲ ಸಾಧಕ- ಬಾಧಕಗಳ ಕುರಿತು ಚರ್ಚೆ ಹಾಗೂ ಸಮಾಲೋಚನೆ ನಡೆಯಲಿದೆ ಎಂದರು.</p>.<p>ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಎಂ.ಎ.ಗಫೂರ್ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಸೋಮಶೇಖರ್ ಉಡುಪ ಅವರನ್ನು ಸನ್ಮಾನಿಸಲಾಯಿತು.</p>.<p>ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರೆಹಮಾನ್ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು. ಉಪ ವಿಭಾಗಾಧಿಕಾರಿ ರಶ್ಮೀ ಎಸ್.ಆರ್., ಸರ್ಕಾರದ ವಿಷನ್ ಗ್ರೂಪ್ ಫಾರ್ ಹೈಯರ್ ಎಜುಕೇಶನ್ ಹಾಗೂ ರಿಸರ್ಚ್ ನ ಅರುಣ್ ಸೀತಾರಾಮ್, ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ಡಾ.ಆಸೀಫ್ ಬ್ಯಾರಿ, ಅಶ್ರಫ್, ಡಾ.ಸಿದ್ದಿಕ್, ಕೋಡಿ ಚಕ್ರಮ್ಮ ದೇವಸ್ಥಾನದ ಅಧ್ಯಕ್ಷ ಗೋಪಾಲ ಪೂಜಾರಿ, ಕೆಎಂಎಫ್ ನ ಮಂಜುನಾಥ್, ಪ್ರಾಂಶುಪಾಲರಾದ ಡಾ.ಪೂರ್ಣಿಮಾ ಶೆಟ್ಟಿ, ಡಾ.ಫಿರ್ದೋಸ್, ಶಬೀನಾ, ಡಾ.ಜಯಶೀಲ ಶೆಟ್ಟಿ, ಜಟ್ಟಪ್ಪ, ಸುಮಿತ್ರಾ ಇದ್ದರು.</p>.<p>ಟ್ರಸ್ಟ್ ಚೇರ್ಮನ್ ಸಯ್ಯದ್ ಮೊಹಮ್ಮದ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕಿ ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ಸ್ವಾತಿ ಮುತ್ತು ಲಮಿಸ್ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>