ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ತಾಲ್ಲೂಕು ಕರವೇ ಘಟಕ ಉದ್ಘಾಟನೆ

Last Updated 26 ನವೆಂಬರ್ 2022, 15:33 IST
ಅಕ್ಷರ ಗಾತ್ರ

ಉಡುಪಿ: ಟಿ.ಎ.ನಾರಾಯಣ ಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ತಾಲ್ಲೂಕು ಘಟಕದ ಉದ್ಘಾಟನಾ ಕಾರ್ಯಕ್ರಮ ಶನಿವಾರ ಬ್ರಹ್ಮಗಿರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಇನ್‌ಸ್ಪೆಕ್ಟರ್ ಪಿ.ಪ್ರಮೋದ್ ಕುಮಾರ್ ಉದ್ಘಾಟಿಸಿದರು. ಉಡುಪಿ ತಾಲ್ಲೂಕು ಅಧ್ಯಕ್ಷ ಅ.ರಾ.ಪ್ರಭಾಕರ್ ರಾಜ್ ಪೂಜಾರಿ ಹಾಗೂ ಮಹಿಳಾ ಅಧ್ಯಕ್ಷೆ ಮಮತಾ ಪ್ರಭಾಕರ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಸುಜಯ ಪೂಜಾರಿ, ಗೌರವಾಧ್ಯಕ್ಷ ಡಾ.ನೇರಿ ಕರ್ನೆಲಿಯೊ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್, ಗೀತಾ ಪಾಂಗಳ ಉಪಸ್ಥಿತರಿದ್ದರು.

ಶಿವಮೊಗ್ಗದ ಶಾರದಾ ಅಂಧರ ಗೀತಾಗಾಯನ ಕಲಾ ಸಂಸ್ಥೆಯಿಂದ ಸಂಗೀತ ಕಾರ್ಯಕ್ರಮ ನಡೆಯಿತು, ಬ್ರಹ್ಮಾವರ ಕರವೇ ಘಟಕದ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಆಪತ್ಭಾಂಧವ ಮೊಹಮ್ಮದ್ ಅಸಿಫ್, ಉರಗ ತಜ್ಞ ಪ್ರಭಾಕರ್ ಜಿ.ಬೆಳ್ಳಿಸರ ಅವರನ್ನು ಸನ್ಮಾನಿಸಲಾಯಿತು.

ಅನುಷಾ ಆಚಾರ್ ಸ್ವಾಗತಿಸಿದರು. ಪ್ರದೀಪ್ ಡಿ.ಎಂ.ಹಾವಂಜೆ ಕಾರ್ಯಕ್ರಮ ನಿರೂಪಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT