<p><strong>ಕಾರ್ಕಳ</strong>: ‘ರ್ಯಾಗಿಂಗ್ ಕ್ರಿಮಿನಲ್ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ’ ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಪ್ರಸನ್ನ ಹೇಳಿದರು.</p>.<p>ತಾಲ್ಲೂಕಿನ ನಿಟ್ಟೆ ಎನ್ಎಂಎಎಂ ತಾಂತ್ರಿಕ ಕಾಲೇಜಿನ ವತಿಯಿಂದ ಮಂಗಳವಾರ ಆಯೋಜಿಸಿದ್ದ ಆ್ಯಂಟಿ ರ್ಯಾಗಿಂಗ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹದಿಂದ ಬಾಳ್ವೆ ನಡೆಸಿ ಸಜ್ಜನರಾಗಿ ಸಾಧನೆ ಮಾಡಬೇಕು ಎಂದರು.</p>.<p>ರ್ಯಾಗಿಂಗ್ ನಮ್ಮ ಸಂಸ್ಕೃತಿ, ಸಭ್ಯತೆಗೆ ವಿರುದ್ಧವಾಗಿದೆ. ರಾಷ್ಟ್ರದ ಭವಿಷ್ಯ ವಿದ್ಯಾರ್ಥಿಗಳಲ್ಲಿದ್ದು, ಎಲ್ಲರೂ ಓದು, ಸಾಧನೆ ಕಡೆ ಗಮನ ಕೊಡಬೇಕು. ಯಾರಾದರೂ ರ್ಯಾಗಿಂಗ್ಗೆ ಪ್ರೇರಣೆ, ರ್ಯಾಗಿಂಗ್ ಮೂಲಕ ಕಿರುಕುಳ ನೀಡಿದಲ್ಲಿ ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸಮಿತಿ ಗಮನಕ್ಕೆ ತರಬೇಕು. ಶಿಕ್ಷಕರು, ಪೊಲೀಸರು ಇರುವ ಈ ಸಮಿತಿ ವಿದ್ಯಾರ್ಥಿಗಳ ಸುರಕ್ಷತೆಗೆ ಮುತುವರ್ಜಿ ವಹಿಸಲಿದೆ ಎಂದು ಹೇಳಿದರು.</p>.<p>ಮಾದಕ ದ್ರವ್ಯ ವ್ಯಸನಗಳಿಂದ ಆಗುವ ಸಮಸ್ಯೆ, ಕಾನೂನು ತೊಡಕಿನಲ್ಲಿ ಸಿಲುಕಿಕೊಂಡರೆ ಆಗಬಹುದಾದ ಅಪಾಯಗಳ ಕುರಿತು ಎಚ್ಚರಿಕೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಸಂಸ್ಥೆಯ ನಿರ್ವಹಣಾ ವಿಭಾಗದ ನಿರ್ದೇಶಕ ಎ. ಯೊಗೀಶ್ ಹೆಗ್ಡೆ ಮಾತನಾಡಿ, ನಿಟ್ಟೆ ವಿದ್ಯಾಸಂಸ್ಥೆ ಉತ್ತಮ ಶಿಕ್ಷಣಕ್ಕೆ ಪೂರಕ ವ್ಯವಸ್ಥೆಗಳನ್ನು ಹೊಂದಿದ್ದು, ವಿದ್ಯಾರ್ಥಿಗಳ ಸುರಕ್ಷತೆ, ಕಾಳಜಿಗೆ ಕಾನೂನಾತ್ಮಕವಾಗಿ ಎಲ್ಲಾ ಸಮಿತಿ, ನಿಯಮಾವಳಿಗಳನ್ನು ವ್ಯವಸ್ಥಿತವಾಗಿ ಪಾಲಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಹೊಂದಿರಬೇಕು ಎಂದರು.</p>.<p>ಕಾರ್ಕಳ ಠಾಣೆಯ ಕ್ರೈಂ ವಿಭಾಗದ ಠಾಣಾಧಿಕಾರಿ ಸುಂದರ್, ನಿಟ್ಟೆ ವಿದ್ಯಾ ಸಂಕೀರ್ಣದ ಪರಿಕ್ಷಾ ನಿಯಂತ್ರಕ ಸುಬ್ರಹ್ಮಣ್ಯು ಭಟ್, ಉಪ ಕುಲಸಚಿವೆ ರೇಖಾ ಭಂಡಾರ್ಕರ್ ಭಾಗವಹಿಸಿದ್ದರು. ಉಪ ಪ್ರಾಂಶುಪಾಲ ನಾಗೇಶ್ ಪ್ರಭು ಸ್ವಾಗತಿಸಿದರು. ಮಾನವಿಕ ವಿಭಾಗದ ಮುಖ್ಯಸ್ಥ ವಿಶ್ವನಾಥ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ‘ರ್ಯಾಗಿಂಗ್ ಕ್ರಿಮಿನಲ್ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ’ ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಪ್ರಸನ್ನ ಹೇಳಿದರು.</p>.<p>ತಾಲ್ಲೂಕಿನ ನಿಟ್ಟೆ ಎನ್ಎಂಎಎಂ ತಾಂತ್ರಿಕ ಕಾಲೇಜಿನ ವತಿಯಿಂದ ಮಂಗಳವಾರ ಆಯೋಜಿಸಿದ್ದ ಆ್ಯಂಟಿ ರ್ಯಾಗಿಂಗ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹದಿಂದ ಬಾಳ್ವೆ ನಡೆಸಿ ಸಜ್ಜನರಾಗಿ ಸಾಧನೆ ಮಾಡಬೇಕು ಎಂದರು.</p>.<p>ರ್ಯಾಗಿಂಗ್ ನಮ್ಮ ಸಂಸ್ಕೃತಿ, ಸಭ್ಯತೆಗೆ ವಿರುದ್ಧವಾಗಿದೆ. ರಾಷ್ಟ್ರದ ಭವಿಷ್ಯ ವಿದ್ಯಾರ್ಥಿಗಳಲ್ಲಿದ್ದು, ಎಲ್ಲರೂ ಓದು, ಸಾಧನೆ ಕಡೆ ಗಮನ ಕೊಡಬೇಕು. ಯಾರಾದರೂ ರ್ಯಾಗಿಂಗ್ಗೆ ಪ್ರೇರಣೆ, ರ್ಯಾಗಿಂಗ್ ಮೂಲಕ ಕಿರುಕುಳ ನೀಡಿದಲ್ಲಿ ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸಮಿತಿ ಗಮನಕ್ಕೆ ತರಬೇಕು. ಶಿಕ್ಷಕರು, ಪೊಲೀಸರು ಇರುವ ಈ ಸಮಿತಿ ವಿದ್ಯಾರ್ಥಿಗಳ ಸುರಕ್ಷತೆಗೆ ಮುತುವರ್ಜಿ ವಹಿಸಲಿದೆ ಎಂದು ಹೇಳಿದರು.</p>.<p>ಮಾದಕ ದ್ರವ್ಯ ವ್ಯಸನಗಳಿಂದ ಆಗುವ ಸಮಸ್ಯೆ, ಕಾನೂನು ತೊಡಕಿನಲ್ಲಿ ಸಿಲುಕಿಕೊಂಡರೆ ಆಗಬಹುದಾದ ಅಪಾಯಗಳ ಕುರಿತು ಎಚ್ಚರಿಕೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಸಂಸ್ಥೆಯ ನಿರ್ವಹಣಾ ವಿಭಾಗದ ನಿರ್ದೇಶಕ ಎ. ಯೊಗೀಶ್ ಹೆಗ್ಡೆ ಮಾತನಾಡಿ, ನಿಟ್ಟೆ ವಿದ್ಯಾಸಂಸ್ಥೆ ಉತ್ತಮ ಶಿಕ್ಷಣಕ್ಕೆ ಪೂರಕ ವ್ಯವಸ್ಥೆಗಳನ್ನು ಹೊಂದಿದ್ದು, ವಿದ್ಯಾರ್ಥಿಗಳ ಸುರಕ್ಷತೆ, ಕಾಳಜಿಗೆ ಕಾನೂನಾತ್ಮಕವಾಗಿ ಎಲ್ಲಾ ಸಮಿತಿ, ನಿಯಮಾವಳಿಗಳನ್ನು ವ್ಯವಸ್ಥಿತವಾಗಿ ಪಾಲಿಸಲಾಗುತ್ತಿದೆ. ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಹೊಂದಿರಬೇಕು ಎಂದರು.</p>.<p>ಕಾರ್ಕಳ ಠಾಣೆಯ ಕ್ರೈಂ ವಿಭಾಗದ ಠಾಣಾಧಿಕಾರಿ ಸುಂದರ್, ನಿಟ್ಟೆ ವಿದ್ಯಾ ಸಂಕೀರ್ಣದ ಪರಿಕ್ಷಾ ನಿಯಂತ್ರಕ ಸುಬ್ರಹ್ಮಣ್ಯು ಭಟ್, ಉಪ ಕುಲಸಚಿವೆ ರೇಖಾ ಭಂಡಾರ್ಕರ್ ಭಾಗವಹಿಸಿದ್ದರು. ಉಪ ಪ್ರಾಂಶುಪಾಲ ನಾಗೇಶ್ ಪ್ರಭು ಸ್ವಾಗತಿಸಿದರು. ಮಾನವಿಕ ವಿಭಾಗದ ಮುಖ್ಯಸ್ಥ ವಿಶ್ವನಾಥ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>