<p><strong>ಕಾರ್ಕಳ:</strong> ಇಲ್ಲಿನ ಭುವನೇಂದ್ರ ಕಾಲೇಜಿನ ಕ್ರೀಡಾಂಗಣದಲ್ಲಿ 2 ದಿನಗಳ ಭುವನೇಂದ್ರ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ನಡೆಯಿತು.</p>.<p>ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಖ್ಯಾತ್ ಶೆಟ್ಟಿ ಅವರು ಟೂರ್ನಿಗೆ ಚಾಲನೆ ನೀಡಿ, ಶೈಕ್ಷಣಿಕ ಜೀವನದ ಮಾನಸಿಕ ಸಿದ್ಧತೆಗೆ ಕ್ರೀಡೆಯ ಅಗತ್ಯವಿದೆ. ಎಲ್ಲ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದರು.</p>.<p>ಕಾರ್ಕಳ ಪುರಸಭೆಯ ಪ್ರದೀಪ್ ರಾಣೆ ಮಾತನಾಡಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಎ.ಕೋಟ್ಯಾನ್ ಮಾತನಾಡಿ, ಕ್ರೀಡೆಯು ಸಂಘಟನೆಯನ್ನು ಪ್ರೋತ್ಸಾಹಿಸುತ್ತದೆ. ಶಿಕ್ಷಣದ ಶಿಸ್ತಿನ ಜತೆಗೆ ಅದರಾಚೆಗಿನ ಪಠ್ಯೇತರ ಚಟುವಟಿಕೆಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ ಎಂದರು.</p>.<p>ಎಲ್ಲ ತಂಡದ ನಾಯಕರಿಗೆ ಜೆರ್ಸಿಯನ್ನು ಹಸ್ತಾಂತರಿಸಲಾಯಿತು. ಸಹ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಂದಕಿಶೋರ್ ಭಾಗವಹಿಸಿದ್ದರು.</p>.<p>ಕ್ರೀಡಾಧಿಕಾರಿ ನವೀನ್ ಚಂದ್ರ ಸ್ವಾಗತಿಸಿದರು. ಶ್ವೇತಾ ನಿರೂಪಿಸಿದರು. ಉಪನ್ಯಾಸಕ ಶಂಕರ್ ಕುಡ್ವ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ಇಲ್ಲಿನ ಭುವನೇಂದ್ರ ಕಾಲೇಜಿನ ಕ್ರೀಡಾಂಗಣದಲ್ಲಿ 2 ದಿನಗಳ ಭುವನೇಂದ್ರ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ನಡೆಯಿತು.</p>.<p>ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಖ್ಯಾತ್ ಶೆಟ್ಟಿ ಅವರು ಟೂರ್ನಿಗೆ ಚಾಲನೆ ನೀಡಿ, ಶೈಕ್ಷಣಿಕ ಜೀವನದ ಮಾನಸಿಕ ಸಿದ್ಧತೆಗೆ ಕ್ರೀಡೆಯ ಅಗತ್ಯವಿದೆ. ಎಲ್ಲ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದರು.</p>.<p>ಕಾರ್ಕಳ ಪುರಸಭೆಯ ಪ್ರದೀಪ್ ರಾಣೆ ಮಾತನಾಡಿದರು. </p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಎ.ಕೋಟ್ಯಾನ್ ಮಾತನಾಡಿ, ಕ್ರೀಡೆಯು ಸಂಘಟನೆಯನ್ನು ಪ್ರೋತ್ಸಾಹಿಸುತ್ತದೆ. ಶಿಕ್ಷಣದ ಶಿಸ್ತಿನ ಜತೆಗೆ ಅದರಾಚೆಗಿನ ಪಠ್ಯೇತರ ಚಟುವಟಿಕೆಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ ಎಂದರು.</p>.<p>ಎಲ್ಲ ತಂಡದ ನಾಯಕರಿಗೆ ಜೆರ್ಸಿಯನ್ನು ಹಸ್ತಾಂತರಿಸಲಾಯಿತು. ಸಹ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಂದಕಿಶೋರ್ ಭಾಗವಹಿಸಿದ್ದರು.</p>.<p>ಕ್ರೀಡಾಧಿಕಾರಿ ನವೀನ್ ಚಂದ್ರ ಸ್ವಾಗತಿಸಿದರು. ಶ್ವೇತಾ ನಿರೂಪಿಸಿದರು. ಉಪನ್ಯಾಸಕ ಶಂಕರ್ ಕುಡ್ವ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>