<p>ಕಾರ್ಕಳ: ಹವಾಮಾನ ಬಿಕ್ಕಟ್ಟು ವಿಶ್ವದ ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಸುಸ್ಥಿರತೆ ಮತ್ತು ಸಮತೆ ಕಾರ್ಯಕರ್ತ ಶ್ರೀಕುಮಾರ್ ತಿಳಿಸಿದರು.</p>.<p>ಇಲ್ಲಿನ ಅನಂತಶಯನದ ಸಂಭ್ರಮ ಸಭಾಂಗಣದಲ್ಲಿ ಕಾರ್ಕಳ ಹಿರಿಯ ನಾಗರಿಕರ ಸಂಘ, ಸಹಬಾಳ್ವೆ ಕಾರ್ಕಳ ಸಂಘದ ಆಶ್ರಯದಲ್ಲಿ ‘ಹವಾಮಾನ ಬಿಕ್ಕಟ್ಟು ತಾಂತ್ರಿಕ ಪರಿಹಾರ ಸಾಧ್ಯವೇ’ ಎಂಬ ಕುರಿತು ನಡೆದ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>ಆರ್ಥಿಕ ಅಸಮಾನತೆ, ಐಷಾರಾಮಿ ಜೀವನ, ಆಧುನಿಕ ತಂತ್ರಜ್ಞಾನಗಳು ಇದಕ್ಕೆ ಮೂಲ ಕಾರಣ. ಭೂಮಿಯಲ್ಲಿರುವ ಖನಿಜ, ಅನಿಲ, ತೈಲ ಮಿತ ಪ್ರಮಾಣದಲ್ಲಿ ಇರುವ ಕಾರಣ ಸೌರಶಕ್ತಿ ಬಳಕೆ ಮಾಡಬೇಕಾಗಿದ್ದು, ಪ್ರಕೃತಿಯನ್ನು ಮುಂದಿನ ಪೀಳಿಗೆಗೂ ಉಳಿಸುವ ಪ್ರಯತ್ನ ಆಗಬೇಕಾಗಿದೆ ಎಂದರು.</p>.<p>ಕಾರ್ಕಳ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಎಂ. ಕಮಲಾಕ್ಷ ಕಾಮತ್ ಸ್ವಾಗತಿಸಿದರು. ಕಾರ್ಯದರ್ಶಿ ಜಗದೀಶ ಗೋಖಲೆ ಪರಿಚಯಿಸಿದರು. ಕವಯಿತ್ರಿ ಜ್ಯೋತಿ ಗುರುಪ್ರಸಾದ್ ಪ್ರಾರ್ಥಿಸಿದರು. ಜೋಕಿಂ ಮೈಕೇಲ್ ಪಿಂಟೊ ವಂದಿಸಿದರು. ಶೈಲಜಾ ಹೆಗ್ಡೆ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-28-2057626788</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಕಳ: ಹವಾಮಾನ ಬಿಕ್ಕಟ್ಟು ವಿಶ್ವದ ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಸುಸ್ಥಿರತೆ ಮತ್ತು ಸಮತೆ ಕಾರ್ಯಕರ್ತ ಶ್ರೀಕುಮಾರ್ ತಿಳಿಸಿದರು.</p>.<p>ಇಲ್ಲಿನ ಅನಂತಶಯನದ ಸಂಭ್ರಮ ಸಭಾಂಗಣದಲ್ಲಿ ಕಾರ್ಕಳ ಹಿರಿಯ ನಾಗರಿಕರ ಸಂಘ, ಸಹಬಾಳ್ವೆ ಕಾರ್ಕಳ ಸಂಘದ ಆಶ್ರಯದಲ್ಲಿ ‘ಹವಾಮಾನ ಬಿಕ್ಕಟ್ಟು ತಾಂತ್ರಿಕ ಪರಿಹಾರ ಸಾಧ್ಯವೇ’ ಎಂಬ ಕುರಿತು ನಡೆದ ಉಪನ್ಯಾಸದಲ್ಲಿ ಅವರು ಮಾತನಾಡಿದರು.</p>.<p>ಆರ್ಥಿಕ ಅಸಮಾನತೆ, ಐಷಾರಾಮಿ ಜೀವನ, ಆಧುನಿಕ ತಂತ್ರಜ್ಞಾನಗಳು ಇದಕ್ಕೆ ಮೂಲ ಕಾರಣ. ಭೂಮಿಯಲ್ಲಿರುವ ಖನಿಜ, ಅನಿಲ, ತೈಲ ಮಿತ ಪ್ರಮಾಣದಲ್ಲಿ ಇರುವ ಕಾರಣ ಸೌರಶಕ್ತಿ ಬಳಕೆ ಮಾಡಬೇಕಾಗಿದ್ದು, ಪ್ರಕೃತಿಯನ್ನು ಮುಂದಿನ ಪೀಳಿಗೆಗೂ ಉಳಿಸುವ ಪ್ರಯತ್ನ ಆಗಬೇಕಾಗಿದೆ ಎಂದರು.</p>.<p>ಕಾರ್ಕಳ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಎಂ. ಕಮಲಾಕ್ಷ ಕಾಮತ್ ಸ್ವಾಗತಿಸಿದರು. ಕಾರ್ಯದರ್ಶಿ ಜಗದೀಶ ಗೋಖಲೆ ಪರಿಚಯಿಸಿದರು. ಕವಯಿತ್ರಿ ಜ್ಯೋತಿ ಗುರುಪ್ರಸಾದ್ ಪ್ರಾರ್ಥಿಸಿದರು. ಜೋಕಿಂ ಮೈಕೇಲ್ ಪಿಂಟೊ ವಂದಿಸಿದರು. ಶೈಲಜಾ ಹೆಗ್ಡೆ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-28-2057626788</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>