<p>ಕಾರ್ಕಳ: ನಗರದಲ್ಲಿ ಪರಿಸರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ‘ಸ್ವಚ್ಛ ಕಾರ್ಕಳ ಬ್ರಿಗೇಡ್’ ವತಿಯಿಂದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.</p>.<p>ನಗರದ ಹಲವೆಡೆ ಜಲಜೀವನ ಮಿಷನ್ ಅಡಿಯಲ್ಲಿ ನೀರಿನ ಪೈಪ್ ಅಳವಡಿಸುವ ವೇಳೆ ತೆಗೆಯಲಾದ ಮಣ್ಣನ್ನು ಚರಂಡಿಗಳಲ್ಲೇ ಹಾಕಿರುವುದರಿಂದ ಮಳೆನೀರಿನ ಹರಿವಿಗೆ ಅಡಚಣೆಯಾಗುತ್ತಿದೆ. ಇದರಿಂದ ಚರಂಡಿಗಳಲ್ಲಿ ಹೂಳು ತುಂಬಿ, ಅನೇಕ ಕಡೆ ನೀರು ನಿಲ್ಲುವ ಸಮಸ್ಯೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ಇದಲ್ಲದೆ, ಕೆಲವರು ರಸ್ತೆ ಬದಿಯ ಚರಂಡಿಗಳಿಗೆ ಕಸ ಎಸೆಯುತ್ತಿರುವುದರಿಂದ ಮಳೆಯ ನೀರಿನೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ ಮತ್ತು ಕೆರೆಗಳಿಗೆ ಸೇರಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ಇದು ಸಾರ್ವಜನಿಕರ ಆರೋಗ್ಯಕ್ಕೂ ಹಾನಿಕಾರಿಯಾಗಿದೆ ಎಂದು ಉಲ್ಲೇಖಿಸಲಾಗಿದೆ.</p>.<p>ಈ ಹಿನ್ನೆಲೆ, ಕಸ ಎಸೆಯುವವರನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸುವಂತೆ ಮನವಿ ಮಾಡಲಾಗಿದೆ.</p>.<p>ಪ್ರಸಾದ್, ನಾಗೇಶ್ ರಾವ್, ರಾಜೇಂದ್ರ ಅಮೀನ್, ಅನಿಲ್, ನಿಖಿಲ್ ಆಚಾರ್ಯ, ಶ್ರೀಶ ಭಟ್, ಪ್ರಕಾಶ್ ರಾವ್, ಸುಬ್ರಹ್ಮಣ್ಯ ದೇವಾಡಿಗ, ಶ್ರೀರಾಮ ಮೊಗೇರ, ಡಾ. ಗುರುಚರಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-28-1800557523</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಕಳ: ನಗರದಲ್ಲಿ ಪರಿಸರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ‘ಸ್ವಚ್ಛ ಕಾರ್ಕಳ ಬ್ರಿಗೇಡ್’ ವತಿಯಿಂದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.</p>.<p>ನಗರದ ಹಲವೆಡೆ ಜಲಜೀವನ ಮಿಷನ್ ಅಡಿಯಲ್ಲಿ ನೀರಿನ ಪೈಪ್ ಅಳವಡಿಸುವ ವೇಳೆ ತೆಗೆಯಲಾದ ಮಣ್ಣನ್ನು ಚರಂಡಿಗಳಲ್ಲೇ ಹಾಕಿರುವುದರಿಂದ ಮಳೆನೀರಿನ ಹರಿವಿಗೆ ಅಡಚಣೆಯಾಗುತ್ತಿದೆ. ಇದರಿಂದ ಚರಂಡಿಗಳಲ್ಲಿ ಹೂಳು ತುಂಬಿ, ಅನೇಕ ಕಡೆ ನೀರು ನಿಲ್ಲುವ ಸಮಸ್ಯೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ಇದಲ್ಲದೆ, ಕೆಲವರು ರಸ್ತೆ ಬದಿಯ ಚರಂಡಿಗಳಿಗೆ ಕಸ ಎಸೆಯುತ್ತಿರುವುದರಿಂದ ಮಳೆಯ ನೀರಿನೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ ಮತ್ತು ಕೆರೆಗಳಿಗೆ ಸೇರಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ಇದು ಸಾರ್ವಜನಿಕರ ಆರೋಗ್ಯಕ್ಕೂ ಹಾನಿಕಾರಿಯಾಗಿದೆ ಎಂದು ಉಲ್ಲೇಖಿಸಲಾಗಿದೆ.</p>.<p>ಈ ಹಿನ್ನೆಲೆ, ಕಸ ಎಸೆಯುವವರನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸುವಂತೆ ಮನವಿ ಮಾಡಲಾಗಿದೆ.</p>.<p>ಪ್ರಸಾದ್, ನಾಗೇಶ್ ರಾವ್, ರಾಜೇಂದ್ರ ಅಮೀನ್, ಅನಿಲ್, ನಿಖಿಲ್ ಆಚಾರ್ಯ, ಶ್ರೀಶ ಭಟ್, ಪ್ರಕಾಶ್ ರಾವ್, ಸುಬ್ರಹ್ಮಣ್ಯ ದೇವಾಡಿಗ, ಶ್ರೀರಾಮ ಮೊಗೇರ, ಡಾ. ಗುರುಚರಣ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-28-1800557523</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>