ಸಮಾರೋಪ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟು, ತರಬೇತುದಾರ ಪಿ. ಚೇತನ್ ಕುಮಾರ್, ಕಬಡ್ಡಿ ತರಬೇತುದಾರ ಶಶಿಧರ್ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾಕೂಟದ ವೀಕ್ಷಕ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ ಅಭಿನಂದಿಸಿದರು.