ಕಾರ್ಕಳ: ವಿಪರೀತ ಮದ್ಯಪಾನದ ಚಟಕ್ಕೆ ಅಂಟಿಕೊಂಡಿರುವ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ವಾಸ್ತವ್ಯವಿಲ್ಲದ ಶೆಡ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಮುಡಾರು ಗ್ರಾಮದ ಕೊಂಕದ ಕಾಪು ಎಂಬಲ್ಲಿ ನಡೆದಿದೆ.
ಬಜಗೋಳಿ ಗರಡಿಗುಡ್ಡೆ ನಿವಾಸಿ ಪ್ರಶಾಂತ(29) ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.