<p><strong>ಕಾರ್ಕಳ:</strong> ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ಕೇವಲ ಭಾಷಣವಲ್ಲ, ಅದು ದೇಶದ ಕಟ್ಟ ಕಡೆಯ ವ್ಯಕ್ತಿಯ ಸಾಧನೆಯನ್ನು ಗುರುತಿಸುವ ಮತ್ತು ಜನಸಾಮಾನ್ಯರಲ್ಲಿ ದೇಶ ಪ್ರೇಮವನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.</p>.<p>ಕಾರ್ಕಳ ತಾಲ್ಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ಲಯನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ‘ಮನ್ ಕೀ ಬಾತ್’ ಕಾರ್ಯಕ್ರಮದ 129ನೇ ಆವೃತ್ತಿಯ ನೇರ ಪ್ರಸಾರವನ್ನು ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.</p>.<p>ರಾಜಕೀಯ ರಹಿತವಾಗಿ ದೇಶದ ವಿವಿಧ ಮೂಲೆಗಳಲ್ಲಿರುವ ಅನಾಮಧೇಯ ಸಾಧಕರನ್ನು ಮೋದಿ ಅವರು ಇಡೀ ಜಗತ್ತಿಗೆ ಪರಿಚಯಿಸುತ್ತಿದ್ದಾರೆ. ಇದು ಯುವ ಪೀಳಿಗೆಗೆ ದೊಡ್ಡ ಸ್ಫೂರ್ತಿ. ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ರಾಷ್ಟ್ರಚಿಂತನೆ ಬೆಳೆಯಲು ಇಂತಹ ಕಾರ್ಯಕ್ರಮಗಳಿಂದ ಸಾಧ್ಯವಾಗುತ್ತದೆ ಎಂದರು.</p>.<p>ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ದೇಶದ ಹಳ್ಳಿ ಹಳ್ಳಿಗಳಲ್ಲಿರುವ ಸಂಸ್ಕೃತಿ, ಕಲೆ ಮತ್ತು ದೇಶಿಯ ಉತ್ಪನ್ನಗಳಿಗೆ ಮನ್ ಕೀ ಬಾತ್ ಮೂಲಕ ಹೊಸ ಆಯಾಮ ಸಿಕ್ಕಿದೆ ಎಂದರು.</p>.<p>ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಕಾರ್ಕಳ ಮಂಡಲಾಧ್ಯಕ್ಷ ನವೀನ್ ನಾಯಕ್, ಪ್ರಮುಖರಾದ ಕೆ. ಉದಯ ಕುಮಾರ್ ಶೆಟ್ಡಿ, ಮಹಾವೀರ ಹೆಗ್ಡೆ, ಶಿಲ್ಪಾ ಜಿ. ಸುವರ್ಣ, ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ:</strong> ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವು ಕೇವಲ ಭಾಷಣವಲ್ಲ, ಅದು ದೇಶದ ಕಟ್ಟ ಕಡೆಯ ವ್ಯಕ್ತಿಯ ಸಾಧನೆಯನ್ನು ಗುರುತಿಸುವ ಮತ್ತು ಜನಸಾಮಾನ್ಯರಲ್ಲಿ ದೇಶ ಪ್ರೇಮವನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.</p>.<p>ಕಾರ್ಕಳ ತಾಲ್ಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆ ಲಯನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ್ದ ‘ಮನ್ ಕೀ ಬಾತ್’ ಕಾರ್ಯಕ್ರಮದ 129ನೇ ಆವೃತ್ತಿಯ ನೇರ ಪ್ರಸಾರವನ್ನು ವೀಕ್ಷಿಸಿದ ಬಳಿಕ ಅವರು ಮಾತನಾಡಿದರು.</p>.<p>ರಾಜಕೀಯ ರಹಿತವಾಗಿ ದೇಶದ ವಿವಿಧ ಮೂಲೆಗಳಲ್ಲಿರುವ ಅನಾಮಧೇಯ ಸಾಧಕರನ್ನು ಮೋದಿ ಅವರು ಇಡೀ ಜಗತ್ತಿಗೆ ಪರಿಚಯಿಸುತ್ತಿದ್ದಾರೆ. ಇದು ಯುವ ಪೀಳಿಗೆಗೆ ದೊಡ್ಡ ಸ್ಫೂರ್ತಿ. ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ರಾಷ್ಟ್ರಚಿಂತನೆ ಬೆಳೆಯಲು ಇಂತಹ ಕಾರ್ಯಕ್ರಮಗಳಿಂದ ಸಾಧ್ಯವಾಗುತ್ತದೆ ಎಂದರು.</p>.<p>ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ದೇಶದ ಹಳ್ಳಿ ಹಳ್ಳಿಗಳಲ್ಲಿರುವ ಸಂಸ್ಕೃತಿ, ಕಲೆ ಮತ್ತು ದೇಶಿಯ ಉತ್ಪನ್ನಗಳಿಗೆ ಮನ್ ಕೀ ಬಾತ್ ಮೂಲಕ ಹೊಸ ಆಯಾಮ ಸಿಕ್ಕಿದೆ ಎಂದರು.</p>.<p>ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಕಾರ್ಕಳ ಮಂಡಲಾಧ್ಯಕ್ಷ ನವೀನ್ ನಾಯಕ್, ಪ್ರಮುಖರಾದ ಕೆ. ಉದಯ ಕುಮಾರ್ ಶೆಟ್ಡಿ, ಮಹಾವೀರ ಹೆಗ್ಡೆ, ಶಿಲ್ಪಾ ಜಿ. ಸುವರ್ಣ, ರೇಷ್ಮಾ ಉದಯ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>