<p><strong>ಕಾರ್ಕಳ</strong>: ಕಾಂಗ್ರೆಸ್ ಸರ್ಕಾರ ರಾಜ್ಯದ ಬಡಜನರ ಪಡಿತರ ಚೀಟಿ ರದ್ದು ಮಾಡುವ ಮೂಲಕ 6ನೇ ಭಾಗ್ಯ ನೀಡಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಆರೋಪಿಸಿದರು.</p>.<p>ತಾಲ್ಲೂಕಿನ ಬಜಗೋಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ದಿವಾಳಿಯಾಗಿದೆ. ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯದ ಆರ್ಥಿಕತೆ ಅಧೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೆ ಬಡವರ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲು ಸರ್ಕಾರ ಮುಂದಾಗಿದೆ ಎಂದು ದೂರಿದರು.</p>.<p>ಮುಡಾದಿಂದ ಅಕ್ರಮವಾಗಿ ಪಡೆದಿರುವ 14 ಸೈಟುಗಳನ್ನು ವಾಪಸ್ ನೀಡುವ ಮೂಲಕ ಮುಖ್ಯಮಂತ್ರಿ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಅಧಿಕಾರಕ್ಕೆ ಅಂಟಿಕೊಳ್ಳದೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.</p>.<p>ಮಂಡಲ ಅಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್, ಕಾರ್ಕಳ ಮಂಡಲದ ಉಪಾಧ್ಯಕ್ಷ ಅನಂತಕೃಷ್ಣ ಶೆಣೈ, ಮರ್ಣೆ ಶಕ್ತಿಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಹಿರ್ಗಾನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ಕಾಂಗ್ರೆಸ್ ಸರ್ಕಾರ ರಾಜ್ಯದ ಬಡಜನರ ಪಡಿತರ ಚೀಟಿ ರದ್ದು ಮಾಡುವ ಮೂಲಕ 6ನೇ ಭಾಗ್ಯ ನೀಡಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಆರೋಪಿಸಿದರು.</p>.<p>ತಾಲ್ಲೂಕಿನ ಬಜಗೋಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ದಿವಾಳಿಯಾಗಿದೆ. ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯದ ಆರ್ಥಿಕತೆ ಅಧೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೆ ಬಡವರ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲು ಸರ್ಕಾರ ಮುಂದಾಗಿದೆ ಎಂದು ದೂರಿದರು.</p>.<p>ಮುಡಾದಿಂದ ಅಕ್ರಮವಾಗಿ ಪಡೆದಿರುವ 14 ಸೈಟುಗಳನ್ನು ವಾಪಸ್ ನೀಡುವ ಮೂಲಕ ಮುಖ್ಯಮಂತ್ರಿ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಅಧಿಕಾರಕ್ಕೆ ಅಂಟಿಕೊಳ್ಳದೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.</p>.<p>ಮಂಡಲ ಅಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್, ಕಾರ್ಕಳ ಮಂಡಲದ ಉಪಾಧ್ಯಕ್ಷ ಅನಂತಕೃಷ್ಣ ಶೆಣೈ, ಮರ್ಣೆ ಶಕ್ತಿಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಹಿರ್ಗಾನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>