ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಹಾಗೂ ಪಡುಬಿದ್ರಿ ರಾಜ್ಯ ಹೆದ್ದಾರಿ ಬಂದ್ಗೆ ಸ್ಥಳೀಯ ಉದ್ಯಮಿಗಳು, ವರ್ತಕರು, ಸಂಘ ಸಂಸ್ಥೆಗಳ ಮುಖಂಡರು, ಬಸ್ ಮಾಲೀಕರು, ರಿಕ್ಷಾ ಮಾಲೀಕರು, ಟ್ಯಾಕ್ಸಿ ಅಸೋಸಿಯೇನ್, ಕ್ರಷರ್ ಉದ್ಯಮಿಗಳು, ಕಲ್ಲು ಗಣಗಾರಿಕೆ ಉದ್ಯಮಿಗಳು, ಕೃಷಿಕರು ಬೆಂಬಲ ಸೂಚಿಸಿದ್ದಾರೆ. ಅಂದು ಬೆಳಿಗ್ಗೆ 9ಗಂಟೆಗೆ ಬೆಳ್ಮಣ್ಣು ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಮೆರವಣೆಗೆ ನಡೆಯಲಿದೆ. ಪ್ರತಿಭಟನೆಯಲ್ಲಿ 40ಕ್ಕೂ ಹೆಚ್ಚಿನ ಹಳ್ಳಿಯ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.