<p><strong>ಕಾರ್ಕಳ</strong>: ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್ನಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶದಂತೆ ಶುಕ್ರವಾರ ಸ್ವಚ್ಛತಾ ಕಾರ್ಯ ಆರಂಭಗೊಂಡಿತು.</p>.<p>ಶಾಸಕ ವಿ. ಸುನಿಲ್ ಕುಮಾರ್ ಅವರು ಪರಶುರಾಮಕು ಥೀಮ್ ಪಾರ್ಕ್ಗೆ ಈಚೆಗೆ ಭೇಟಿ ನೀಡಿ ಗಿಡಗಂಟಿ ಪೊದೆಗಳಿಂದ ಆವೃತವಾದ ಪಾರ್ಕ್ ಪರಿಸರವನ್ನು ಜಿಲ್ಲಾಡಳಿತ ಸ್ವಚ್ಛಗೊಳಿಸುವುದಾಗಿ ಮಾಧ್ಯಮ ಹೇಳಿಕೆ ನೀಡಿದ್ದರು. ಜಿಲ್ಲಾಡಳಿತ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಲಿಖಿತ ಆದೇಶ ನೀಡಿತ್ತು.</p>.<p>ಪಾರ್ಕ್ನಲ್ಲಿ ಸಿ.ಸಿ.ಟಿವಿ. ಕ್ಯಾಮೆರಾ ಅಳವಡಿಸುವುದು, ಭದ್ರತಾ ದೃಷ್ಟಿಯಿಂದ ಕಾವಲುಗಾರ ನಿಯೋಜಿಸುವುದು, ಅಧಿಕೃತ ವ್ತಕ್ಯಿಗಳನ್ನು ಹೊರತುಪಡಿಸಿ ಸಾರ್ವಜನಿಕ ಪ್ರವೇಶ ನಿಷೇಧ, ಥೀಮ್ ಪಾರ್ಕ್ ರಸ್ತೆಯಲ್ಲಿ ಸ್ವಚ್ಛತೆ, ಅಲ್ಲಿರುವ ಅಮೂಲ್ಯ ವಸ್ತುಗಳ ರಕ್ಷಣೆ, ಥೀಮ್ ಪಾರ್ಕ್ ಕಾಮಗಾರಿ ಮುಕ್ತಾಯಗೊಳ್ಳುವವರೆಗೆ ಸಂಪೂರ್ಣ ಜವಾಬ್ದಾರಿ ವಹಿಸುವಂತೆ ಆದೇಶಿಸಲಾಗಿದೆ.</p>.<p>ಥೀಮ್ ಪಾರ್ಕ್ ಪ್ರದೇಶಕ್ಕೆ ಯಾರಾದರೂ ಅತಿಕ್ರಮಣ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್ನಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶದಂತೆ ಶುಕ್ರವಾರ ಸ್ವಚ್ಛತಾ ಕಾರ್ಯ ಆರಂಭಗೊಂಡಿತು.</p>.<p>ಶಾಸಕ ವಿ. ಸುನಿಲ್ ಕುಮಾರ್ ಅವರು ಪರಶುರಾಮಕು ಥೀಮ್ ಪಾರ್ಕ್ಗೆ ಈಚೆಗೆ ಭೇಟಿ ನೀಡಿ ಗಿಡಗಂಟಿ ಪೊದೆಗಳಿಂದ ಆವೃತವಾದ ಪಾರ್ಕ್ ಪರಿಸರವನ್ನು ಜಿಲ್ಲಾಡಳಿತ ಸ್ವಚ್ಛಗೊಳಿಸುವುದಾಗಿ ಮಾಧ್ಯಮ ಹೇಳಿಕೆ ನೀಡಿದ್ದರು. ಜಿಲ್ಲಾಡಳಿತ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಲಿಖಿತ ಆದೇಶ ನೀಡಿತ್ತು.</p>.<p>ಪಾರ್ಕ್ನಲ್ಲಿ ಸಿ.ಸಿ.ಟಿವಿ. ಕ್ಯಾಮೆರಾ ಅಳವಡಿಸುವುದು, ಭದ್ರತಾ ದೃಷ್ಟಿಯಿಂದ ಕಾವಲುಗಾರ ನಿಯೋಜಿಸುವುದು, ಅಧಿಕೃತ ವ್ತಕ್ಯಿಗಳನ್ನು ಹೊರತುಪಡಿಸಿ ಸಾರ್ವಜನಿಕ ಪ್ರವೇಶ ನಿಷೇಧ, ಥೀಮ್ ಪಾರ್ಕ್ ರಸ್ತೆಯಲ್ಲಿ ಸ್ವಚ್ಛತೆ, ಅಲ್ಲಿರುವ ಅಮೂಲ್ಯ ವಸ್ತುಗಳ ರಕ್ಷಣೆ, ಥೀಮ್ ಪಾರ್ಕ್ ಕಾಮಗಾರಿ ಮುಕ್ತಾಯಗೊಳ್ಳುವವರೆಗೆ ಸಂಪೂರ್ಣ ಜವಾಬ್ದಾರಿ ವಹಿಸುವಂತೆ ಆದೇಶಿಸಲಾಗಿದೆ.</p>.<p>ಥೀಮ್ ಪಾರ್ಕ್ ಪ್ರದೇಶಕ್ಕೆ ಯಾರಾದರೂ ಅತಿಕ್ರಮಣ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>