<p><strong>ಕಾರ್ಕಳ</strong> : ಹಾಲಿನ ಬೆಲೆ ಏರಿಕೆಯನ್ನು ವಿರೋಧಿಸಿ ಶಾಸಕ ವಿ. ಸುನಿಲ್ ಕುಮಾರ್ ಹಾಲಿಲ್ಲದ ಚಹಾ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದು, ಶಾಸಕರಿಗೆ ಈ ರೀತಿಯ ಪ್ರತಿಭಟನೆ ಸಾಮಾನ್ಯವಾಗಬಹುದು. ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಅವರಿಗೆ ಹಾಲಿಲ್ಲದ ಚಹಾ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ವ್ಯಂಗ್ಯ ಮಾಡಿದ್ದಾರೆ.</p>.<p>ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿ ರೈತರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ. ಉತ್ಪಾದನೆಯಾದ ಹೆಚ್ಚುವರಿ ಹಾಲನ್ನು ಪ್ಯಾಕೆಟಿಗೆ 50 ಮಿ.ಲೀ ಸೇರಿಸಿ ಮಾರಾಟ ಮಾಡಲಾಗುತ್ತದೆ. ಆ ಹೆಚ್ಚುವರಿ ಹಾಲಿಗೆ ₹2ನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತದೆ. ಇದರಿಂದ ಬೆಲೆ ಏರಿಕೆ ಮಾಡಿದಂತಾಗುವುದಿಲ್ಲ.</p>.<p>ಇದರಿಂದ ಹಾಲು ಉತ್ಪಾದಕರಿಗೆ ಲಾಭದಾಯಕವಾಗಿದೆ. ಇದು ಯಾರಿಗೂ ಹೊರೆಯಾಗಿಲ್ಲ. ಇದನ್ನು ರಾಜ್ಯದ ಮುಖ್ಯಮಂತ್ರಿಯೇ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅರ್ಥಹೀನವಾಗಿದೆ. ಹಾಲಿನ ಬೆಲೆಯನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ಪ್ರಧಾನಿ ತವರು ಗುಜರಾತಿನಲ್ಲಿ ಅತೀ ಹೆಚ್ಚಿದೆ. ಈ ಕುರಿತು ಬಿಜೆಪಿಯ ಪ್ರತಿಭಟನೆ ಇಲ್ಲವೇ? ಎಂದು ಶುಭದ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong> : ಹಾಲಿನ ಬೆಲೆ ಏರಿಕೆಯನ್ನು ವಿರೋಧಿಸಿ ಶಾಸಕ ವಿ. ಸುನಿಲ್ ಕುಮಾರ್ ಹಾಲಿಲ್ಲದ ಚಹಾ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದು, ಶಾಸಕರಿಗೆ ಈ ರೀತಿಯ ಪ್ರತಿಭಟನೆ ಸಾಮಾನ್ಯವಾಗಬಹುದು. ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಅವರಿಗೆ ಹಾಲಿಲ್ಲದ ಚಹಾ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ವ್ಯಂಗ್ಯ ಮಾಡಿದ್ದಾರೆ.</p>.<p>ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿ ರೈತರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ. ಉತ್ಪಾದನೆಯಾದ ಹೆಚ್ಚುವರಿ ಹಾಲನ್ನು ಪ್ಯಾಕೆಟಿಗೆ 50 ಮಿ.ಲೀ ಸೇರಿಸಿ ಮಾರಾಟ ಮಾಡಲಾಗುತ್ತದೆ. ಆ ಹೆಚ್ಚುವರಿ ಹಾಲಿಗೆ ₹2ನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತದೆ. ಇದರಿಂದ ಬೆಲೆ ಏರಿಕೆ ಮಾಡಿದಂತಾಗುವುದಿಲ್ಲ.</p>.<p>ಇದರಿಂದ ಹಾಲು ಉತ್ಪಾದಕರಿಗೆ ಲಾಭದಾಯಕವಾಗಿದೆ. ಇದು ಯಾರಿಗೂ ಹೊರೆಯಾಗಿಲ್ಲ. ಇದನ್ನು ರಾಜ್ಯದ ಮುಖ್ಯಮಂತ್ರಿಯೇ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಅರ್ಥಹೀನವಾಗಿದೆ. ಹಾಲಿನ ಬೆಲೆಯನ್ನು ಇತರ ರಾಜ್ಯಗಳಿಗೆ ಹೋಲಿಸಿದರೆ ಪ್ರಧಾನಿ ತವರು ಗುಜರಾತಿನಲ್ಲಿ ಅತೀ ಹೆಚ್ಚಿದೆ. ಈ ಕುರಿತು ಬಿಜೆಪಿಯ ಪ್ರತಿಭಟನೆ ಇಲ್ಲವೇ? ಎಂದು ಶುಭದ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>