ನಿರ್ದಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾ ಕೊರಗ ಸಂಘ ಆಗ್ರಹ
ತಾಲ್ಲೂಕಿನಲ್ಲಿ ಈಚೆಗೆ ನಡೆದ ಬಡ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಉಡುಪಿ ಜಿಲ್ಲಾ ಕೊರಗ ಸಂಘವು ತೀವ್ರವಾಗಿ ಖಂಡಿಸಿದೆ. ಈ ಕೃತ್ಯ ಖಂಡಿಸಿ ಕರ್ನಾಟಕ ಬೋವಿ ಸಮಾಜವು ನಡೆಸುತ್ತಿರುವ ಹೋರಾಟಕ್ಕೆ ನೈತಿಕ ಬೆಂಬಲವನ್ನು ಸೂಚಿಸಿರುವ ಸಂಘದ ಅಧ್ಯಕ್ಷರಾದ ಗೌರಿ ಕೊರಗ ‘ಇಂತಹ ಸಮಾಜ ಘಾತುಕರ ವಿರುದ್ಧ ಪೋಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.