<p><strong>ಕಾರ್ಕಳ</strong>: ಇಲ್ಲಿನ ಶ್ರೀರವಿಶಂಕರ ವಿದ್ಯಾಮಂದಿರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವುಗಳ ಸಹಯೋಗದಲ್ಲಿ ‘ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ’ವು ರವಿಶಂಕರ ವಿದ್ಯಾ ಮಂದಿರದಲ್ಲಿ ನಡೆಯಿತು.</p>.<p>ಉಡುಪಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಕಳ ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಅಧ್ಯಕ್ಷೆ ಜ್ಯೋತಿ ಜೆ.ಪೈ. ಅಧ್ಯಕ್ಷತೆ ವಹಿಸಿದ್ದರು.</p>.<p>ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಮೈಸೂರು ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಕಮಿಷನರ್ ಡಾ. ಎಂ.ಮೋಹನ ಆಳ್ವ, ಹಿರಿಯ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಮುಖ್ಯಅತಿಥಿ ಸಂಸ್ಥೆಯ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್, ಜಗದೀಶ್ ಹೆಗ್ಡೆ, ಕೋಶಾಧಿಕಾರಿ ಸತೀಶ್ ಶೆಟ್ಟಿ, ರಾಜ್ಯ ಸಹ ಸಂಘಟಕ ಸುಮನಾ ಶೇಖರ, ಹಿರಿಯ ಗೈಡ್ ಯಶೋದಾ ಹೆಗ್ಡೆ, ಜೊತೆ ಕಾರ್ಯದರ್ಶಿ ಸೀಮಾ ಕಾಮತ್ ಇದ್ದರು.</p>.<p>ರವಿಶಂಕರ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಸೋನಾಲ್ ಕಾಮತ್ ಸ್ವಾಗತಿಸಿದರು. ಶಿಬಿರ ನಾಯಕಿ ಶಿಕ್ಷಕಿ ಚಿತ್ರಾ ಪೈ ದಿನದ ಕಾರ್ಯಕ್ರಮದ ಮುನ್ನೋಟ ನೀಡಿದರು. ಶಿಕ್ಷಕಿ ಭವಾನಿ ನಿರೂಪಿಸಿದರು. ತಾಲ್ಲೂಕಿನ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಗಣೇಶ್ ಜಾಲ್ಸೂರು ವಂದಿಸಿದರು.</p>.<p>ಬಳಿಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್, ಚಿತ್ರಕಲೆ, ಜಾನಪದ ನೃತ್ಯ, ರಸ ಪ್ರಶ್ನೆ, ಮೂಕಾಭಿನಯ, ವಿವಿಧತೆಯಲ್ಲಿ ಏಕತೆ, ಬೆಂಕಿ ಬಳಸದೇ ತಿಂಡಿ ತಯಾರಿ ಚಟುವಟಿಕೆಗಳನ್ನು ಆಯೋಜಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ</strong>: ಇಲ್ಲಿನ ಶ್ರೀರವಿಶಂಕರ ವಿದ್ಯಾಮಂದಿರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವುಗಳ ಸಹಯೋಗದಲ್ಲಿ ‘ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ’ವು ರವಿಶಂಕರ ವಿದ್ಯಾ ಮಂದಿರದಲ್ಲಿ ನಡೆಯಿತು.</p>.<p>ಉಡುಪಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಕಳ ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಅಧ್ಯಕ್ಷೆ ಜ್ಯೋತಿ ಜೆ.ಪೈ. ಅಧ್ಯಕ್ಷತೆ ವಹಿಸಿದ್ದರು.</p>.<p>ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಮೈಸೂರು ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಕಮಿಷನರ್ ಡಾ. ಎಂ.ಮೋಹನ ಆಳ್ವ, ಹಿರಿಯ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಮುಖ್ಯಅತಿಥಿ ಸಂಸ್ಥೆಯ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್, ಜಗದೀಶ್ ಹೆಗ್ಡೆ, ಕೋಶಾಧಿಕಾರಿ ಸತೀಶ್ ಶೆಟ್ಟಿ, ರಾಜ್ಯ ಸಹ ಸಂಘಟಕ ಸುಮನಾ ಶೇಖರ, ಹಿರಿಯ ಗೈಡ್ ಯಶೋದಾ ಹೆಗ್ಡೆ, ಜೊತೆ ಕಾರ್ಯದರ್ಶಿ ಸೀಮಾ ಕಾಮತ್ ಇದ್ದರು.</p>.<p>ರವಿಶಂಕರ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಸೋನಾಲ್ ಕಾಮತ್ ಸ್ವಾಗತಿಸಿದರು. ಶಿಬಿರ ನಾಯಕಿ ಶಿಕ್ಷಕಿ ಚಿತ್ರಾ ಪೈ ದಿನದ ಕಾರ್ಯಕ್ರಮದ ಮುನ್ನೋಟ ನೀಡಿದರು. ಶಿಕ್ಷಕಿ ಭವಾನಿ ನಿರೂಪಿಸಿದರು. ತಾಲ್ಲೂಕಿನ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಗಣೇಶ್ ಜಾಲ್ಸೂರು ವಂದಿಸಿದರು.</p>.<p>ಬಳಿಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್, ಚಿತ್ರಕಲೆ, ಜಾನಪದ ನೃತ್ಯ, ರಸ ಪ್ರಶ್ನೆ, ಮೂಕಾಭಿನಯ, ವಿವಿಧತೆಯಲ್ಲಿ ಏಕತೆ, ಬೆಂಕಿ ಬಳಸದೇ ತಿಂಡಿ ತಯಾರಿ ಚಟುವಟಿಕೆಗಳನ್ನು ಆಯೋಜಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>