ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್, ಐಸಿಎಂಆರ್ ನಿರ್ದೇಶಕ ಡಾ.ಸಂಘಮಿತ್ರ ಪತಿ ಭುವನೇಶ್ವರ್, ಆರೋಗ್ಯ ಸಂಶೋಧನಾ ಇಲಾಖೆ ಜಂಟಿ ಕಾರ್ಯದರ್ಶಿ ಅನು ನಗರ್, ವಿವರಣಾತ್ಮಕ ಸಂಶೋಧನೆ ವಿಭಾಗದ ಡಾ.ಕಾಮಿನಿ ವಾಲಿಯಾ, ಮಾಹೆ ಕುಲಪತಿ ಡಾ.ಎಂ.ಡಿ. ವೆಂಕಟೇಶ್, ಸಹ ಕುಲಪತಿ ಡಾ.ಶರತ್ ಕೆ.ರಾವ್ ಇದ್ದರು. ಐಸಿಎಂಆರ್ ವಿಜ್ಞಾನಿ, ಕಾರ್ಯಕ್ರಮ ಅಧಿಕಾರಿ ಡಾ.ಸುನಿಲ್ ಅಗರ್ವಾಲ್ ಸ್ವಾಗತಿಸಿದರು. ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ ವಂದಿಸಿದರು.