ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಟಿಕೆಟ್ ಘೋಷಿಸಿದೆ.
ಕಾಪು ಕ್ಷೇತ್ರದಿಂದ ವಿನಯ ಕುಮಾರ ಸೊರಕೆ, ಬೈಂದೂರಿನಿಂದ ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರದಿಂದ ಎಂ.ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗಿದೆ.
ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. ಉಡುಪಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಅಳೆದು ತೂಗಿ ಟಿಕೆಟ್ ನೀಡಬೇಕಾಗಿದೆ, ಕಾರ್ಕಳ ಕ್ಷೇತ್ರದಿಂದ ಹಾಲಿ ಸಚಿವ ವಿ.ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿರುವ ಕಾರಣ ಟಿಕೆಟ್ ಘೋಷಣೆಯಾಗಿಲ್ಲ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.