ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. ಉಡುಪಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಅಳೆದು ತೂಗಿ ಟಿಕೆಟ್ ನೀಡಬೇಕಾಗಿದೆ, ಕಾರ್ಕಳ ಕ್ಷೇತ್ರದಿಂದ ಹಾಲಿ ಸಚಿವ ವಿ.ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿರುವ ಕಾರಣ ಟಿಕೆಟ್ ಘೋಷಣೆಯಾಗಿಲ್ಲ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.