ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

Last Updated 25 ಮಾರ್ಚ್ 2023, 7:02 IST
ಅಕ್ಷರ ಗಾತ್ರ

ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಟಿಕೆಟ್ ಘೋಷಿಸಿದೆ.

ಕಾಪು ಕ್ಷೇತ್ರದಿಂದ ವಿನಯ ಕುಮಾರ ಸೊರಕೆ, ಬೈಂದೂರಿನಿಂದ ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರದಿಂದ ಎಂ.ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. ಉಡುಪಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಅಳೆದು ತೂಗಿ ಟಿಕೆಟ್ ನೀಡಬೇಕಾಗಿದೆ, ಕಾರ್ಕಳ ಕ್ಷೇತ್ರದಿಂದ ಹಾಲಿ ಸಚಿವ ವಿ.ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿರುವ ಕಾರಣ ಟಿಕೆಟ್ ಘೋಷಣೆಯಾಗಿಲ್ಲ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT