<p><strong>ಉಡುಪಿ: </strong>ಕಲಬುರ್ಗಿ, ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ಸಮಾವೇಶಗಳಲ್ಲಿ ಜನಸಾಗರ ಕಂಡು ಸಿದ್ದರಾಮಯ್ಯಗೆ ಭಯವಾಗಿದೆ. ಭಯ ಮುಚ್ಚಿಕೊಳ್ಳಲು ಮೋದಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಕಾರ್ಕಳದಲ್ಲಿ ಪರಶುರಾಮ ಥೀಂಪಾರ್ಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಕಾಂಗ್ರೆಸ್ ತುಚ್ಛೀಕರಣದ ರಾಜಕಾರಣ ಮಾಡುತ್ತಿದ್ದು ಒಂದು ವರ್ಗವನ್ನು ತಲೆ ಮೇಲೆ ಕೂರಿಸಿಕೊಂಡು ಕುಣಿಸುತ್ತಿದೆ. ಬಡವರು, ದೀನ ದಲಿತರು, ಹಿಂದುಳಿದ ವರ್ಗದವರನ್ನು ಕಾಂಗ್ರೆಸ್ ಕೈಬಿಟ್ಟಿದೆ. ಕೋಲಾರದಲ್ಲಿ ದಲಿತರು, ಮುಸ್ಲಿಮರು, ಕುರುಬರು ಸಿದ್ದರಾಮಯ್ಯ ವಿರುದ್ಧವೇ ತಿರುಗಿಬಿದ್ದಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p>ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದಂತೆ ಕರಾವಳಿಯನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿಲ್ಲ. ರಾಜ್ಯದ ಪ್ರಮುಖ ಆರ್ಥಿಕ ವಲಯವಾಗಿರುವ ಕರಾವಳಿಯ ಬಂದರುಗಳ ಅಭಿವೃದ್ಧಿಗೆ, ಮೂಲ ಉದ್ಯೋಗಕ್ಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿಸ್ತರಣೆಗೆ ಬಜೆಟ್ನಲ್ಲಿ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.</p>.<p><strong>ನೆಲೆ ಇಲ್ಲದ ಮಾಜಿ ಸಿಎಂ: </strong>ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆಲೆ ಇಲ್ಲದೆ ಪರದಾಡುತ್ತಿರುವ ನಾಯಕ. ವರುಣ, ಚಾಮುಂಡೇಶ್ವರಿ, ಬದಾಮಿ ಬಳಿಕ ಕೋಲಾರದತ್ತ ಮುಖಮಾಡಿದ್ದಾರೆ. ನೆಲೆ ಇಲ್ಲದ ವ್ಯಕ್ತಿಗೆ ಸಿದ್ಧಾಂತಗಳ ಅರಿವು ಏಕೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದರು.</p>.<p>ಹಿಂದುತ್ವ ಎಂದರೆ ರಾಷ್ಟ್ರೀಯತೆ ಹಾಗೂ ಭಾರತೀಯ ಸಂಸ್ಕೃತಿಯಾಗಿದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ರಾಷ್ಟ್ರೀಯತೆಯ ಪ್ರಯೋಗ ಶಾಲೆ. ದೇಶ ಮೊದಲು ಎಂದು ಯೋಚಿಸುವ ಜನರು ಇಲ್ಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕಲಬುರ್ಗಿ, ಮೈಸೂರು, ಬೆಂಗಳೂರು, ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ಸಮಾವೇಶಗಳಲ್ಲಿ ಜನಸಾಗರ ಕಂಡು ಸಿದ್ದರಾಮಯ್ಯಗೆ ಭಯವಾಗಿದೆ. ಭಯ ಮುಚ್ಚಿಕೊಳ್ಳಲು ಮೋದಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಕಾರ್ಕಳದಲ್ಲಿ ಪರಶುರಾಮ ಥೀಂಪಾರ್ಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಕಾಂಗ್ರೆಸ್ ತುಚ್ಛೀಕರಣದ ರಾಜಕಾರಣ ಮಾಡುತ್ತಿದ್ದು ಒಂದು ವರ್ಗವನ್ನು ತಲೆ ಮೇಲೆ ಕೂರಿಸಿಕೊಂಡು ಕುಣಿಸುತ್ತಿದೆ. ಬಡವರು, ದೀನ ದಲಿತರು, ಹಿಂದುಳಿದ ವರ್ಗದವರನ್ನು ಕಾಂಗ್ರೆಸ್ ಕೈಬಿಟ್ಟಿದೆ. ಕೋಲಾರದಲ್ಲಿ ದಲಿತರು, ಮುಸ್ಲಿಮರು, ಕುರುಬರು ಸಿದ್ದರಾಮಯ್ಯ ವಿರುದ್ಧವೇ ತಿರುಗಿಬಿದ್ದಿದ್ದಾರೆ ಎಂದು ವ್ಯಂಗ್ಯವಾಡಿದರು.</p>.<p>ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದಂತೆ ಕರಾವಳಿಯನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿಲ್ಲ. ರಾಜ್ಯದ ಪ್ರಮುಖ ಆರ್ಥಿಕ ವಲಯವಾಗಿರುವ ಕರಾವಳಿಯ ಬಂದರುಗಳ ಅಭಿವೃದ್ಧಿಗೆ, ಮೂಲ ಉದ್ಯೋಗಕ್ಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿಸ್ತರಣೆಗೆ ಬಜೆಟ್ನಲ್ಲಿ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.</p>.<p><strong>ನೆಲೆ ಇಲ್ಲದ ಮಾಜಿ ಸಿಎಂ: </strong>ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆಲೆ ಇಲ್ಲದೆ ಪರದಾಡುತ್ತಿರುವ ನಾಯಕ. ವರುಣ, ಚಾಮುಂಡೇಶ್ವರಿ, ಬದಾಮಿ ಬಳಿಕ ಕೋಲಾರದತ್ತ ಮುಖಮಾಡಿದ್ದಾರೆ. ನೆಲೆ ಇಲ್ಲದ ವ್ಯಕ್ತಿಗೆ ಸಿದ್ಧಾಂತಗಳ ಅರಿವು ಏಕೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದರು.</p>.<p>ಹಿಂದುತ್ವ ಎಂದರೆ ರಾಷ್ಟ್ರೀಯತೆ ಹಾಗೂ ಭಾರತೀಯ ಸಂಸ್ಕೃತಿಯಾಗಿದ್ದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ರಾಷ್ಟ್ರೀಯತೆಯ ಪ್ರಯೋಗ ಶಾಲೆ. ದೇಶ ಮೊದಲು ಎಂದು ಯೋಚಿಸುವ ಜನರು ಇಲ್ಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>