ಕಾರ್ಕಳದಲ್ಲಿ ಪರಶುರಾಮ ಥೀಂಪಾರ್ಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಕಾಂಗ್ರೆಸ್ ತುಚ್ಛೀಕರಣದ ರಾಜಕಾರಣ ಮಾಡುತ್ತಿದ್ದು ಒಂದು ವರ್ಗವನ್ನು ತಲೆ ಮೇಲೆ ಕೂರಿಸಿಕೊಂಡು ಕುಣಿಸುತ್ತಿದೆ. ಬಡವರು, ದೀನ ದಲಿತರು, ಹಿಂದುಳಿದ ವರ್ಗದವರನ್ನು ಕಾಂಗ್ರೆಸ್ ಕೈಬಿಟ್ಟಿದೆ. ಕೋಲಾರದಲ್ಲಿ ದಲಿತರು, ಮುಸ್ಲಿಮರು, ಕುರುಬರು ಸಿದ್ದರಾಮಯ್ಯ ವಿರುದ್ಧವೇ ತಿರುಗಿಬಿದ್ದಿದ್ದಾರೆ ಎಂದು ವ್ಯಂಗ್ಯವಾಡಿದರು.