ಉಡುಪಿ: ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಧಾನಸಭಾ ಚುನಾವಣೆ ಎದುರಿಸಲು ಚುನಾವಣಾ ನಿರ್ವಹಣಾ ಸಮಿತಿಗೆ ಸಂಚಾಲಕಿಯ ಜವಾಬ್ದಾರಿ ವಹಿಸಲಾಗಿದ್ದು ಎಲ್ಲರ ಸಹಕಾರದೊಂದಿಗೆ ಮತ್ತೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದಾಗಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.