<p><strong>ಉಡುಪಿ: </strong>ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ ₹ 5 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಿದ್ಧವಿದ್ದು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕಳೆದ ವರ್ಷ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2, 3 ಹಾಗೂ 4ನೇ ಕಂತಿನ ಹಣವನ್ನು ವಾರದೊಳಗೆ ಬಿಡುಗಡೆ ಮಾಡಲಾಗುವುದು. ಗೃಹ ನಿರ್ಮಾಣ ಮಂಡಳಿಗೆ ₹ 300 ಕೋಟಿ ಬಿಡುಗಡೆ ಮಾಡುತ್ತಿದ್ದು, ಹಣ ಬಿಡುಗಡೆ ಸಂಬಂಧ ಎಲ್ಲ ಫಲಾನುಭವಿಗಳಿಗೂ ಸರ್ಕಾರ ಪತ್ರ ಬರೆದು ಮಾಹಿತಿ ನೀಡಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ ₹ 5 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಿದ್ಧವಿದ್ದು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಕಳೆದ ವರ್ಷ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2, 3 ಹಾಗೂ 4ನೇ ಕಂತಿನ ಹಣವನ್ನು ವಾರದೊಳಗೆ ಬಿಡುಗಡೆ ಮಾಡಲಾಗುವುದು. ಗೃಹ ನಿರ್ಮಾಣ ಮಂಡಳಿಗೆ ₹ 300 ಕೋಟಿ ಬಿಡುಗಡೆ ಮಾಡುತ್ತಿದ್ದು, ಹಣ ಬಿಡುಗಡೆ ಸಂಬಂಧ ಎಲ್ಲ ಫಲಾನುಭವಿಗಳಿಗೂ ಸರ್ಕಾರ ಪತ್ರ ಬರೆದು ಮಾಹಿತಿ ನೀಡಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>