<p>ಶಿರ್ವ: ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಕಟಪಾಡಿಯ ಪರಿಸರವಾದಿ ಕೆ. ಮಹೇಶ್ ಶೆಣೈ ಅವರ ಮನೆ ನಿವೇಶನದಲ್ಲಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಮಿಯಾವಾಕಿ ವನ ನಿರ್ಮಾಣಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ರೈಸಿಂಗ್ ರೋಸ್ ಕ್ರಿಕೆಟ್ ಆಸ್ಟ್ರೇಲಿಯಾದ ಅಧ್ಯಕ್ಷ ಸುಧೀರ್ ನಾಯಕ್ ಕಟಪಾಡಿ ಹಾಗೂ ಆಸ್ಟ್ರೇಲಿಯಾದ ಕ್ರಿಕೆಟ್ ಕೋಚ್ಗಳಾದ ರಿಚರ್ಡ್ ಕ್ಲಿಪ್ಟನ್, ಜೇಸನ್ ಕಾಕ್ಸ್ ಮತ್ತು ಮಿಚ್ ಡೇವಿ ಮುಖ್ಯ ಅತಿಥಿಗಳಾಗಿದ್ದರು.</p>.<p>ಮಹೇಶ್ ಶೆಣೈ ಮಾತನಾಡಿ, ಶುದ್ಧ ಗಾಳಿ ಮತ್ತು ಶುದ್ಧ ಪರಿಸರ, ಆರೋಗ್ಯ ವೃದ್ಧಿಗೆ ಮಿಯಾವಾಕಿ ವನ ಅಗತ್ಯವಾಗಿದೆ. ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕಟಪಾಡಿ ಪಟ್ಟಣದಲ್ಲಿ 30 ಸೆಂಟ್ಸ್ ಜಾಗದಲ್ಲಿ ಕ್ರಿಕೆಟ್ ಬ್ಯಾಟ್ ಮಾದರಿಯಲ್ಲಿ ಮಿಯಾವಾಕಿ ವನವನ್ನು ರೂಪಿಸಲಾಗುತ್ತಿದೆ ಎಂದರು.</p>.<p>ಸಣ್ಣ ಮಕ್ಕಳಿಂದ ಹಿಡಿದು ಹಿರಿಯರ ತನಕ ಕ್ರಿಕೆಟ್ಗೆ ಹೆಚ್ಚಿನ ಆಸಕ್ತಿ ಇರುವ ಕಾರಣ, ಇದೇ ಆಸಕ್ತಿಯನ್ನು ಪರಿಸರ ಜಾಗೃತಿಗೆ ಬಳಸುವ ಉದ್ದೇಶದಿಂದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಈ ವನ ನಿರ್ಮಾಣವಾಗಲಿದೆ ಎಂದು ಹೇಳಿದರು. ಗಣೇಶ್ ಪೈ, ಪರಿಸರವಾದಿ ಪ್ರೇಮಾನಂದ ಕಲ್ಮಾಡಿ, ರಮೇಶ್ ಕಿಣಿ, ಶರಾವತಿ ರವಿ ರಾಜ್, ಅವಿನಾಶ್ ಕಾಮತ್, ಸುಧಾಕರ್ ಕಿಣಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-28-1002874228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರ್ವ: ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಕಟಪಾಡಿಯ ಪರಿಸರವಾದಿ ಕೆ. ಮಹೇಶ್ ಶೆಣೈ ಅವರ ಮನೆ ನಿವೇಶನದಲ್ಲಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಮಿಯಾವಾಕಿ ವನ ನಿರ್ಮಾಣಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ರೈಸಿಂಗ್ ರೋಸ್ ಕ್ರಿಕೆಟ್ ಆಸ್ಟ್ರೇಲಿಯಾದ ಅಧ್ಯಕ್ಷ ಸುಧೀರ್ ನಾಯಕ್ ಕಟಪಾಡಿ ಹಾಗೂ ಆಸ್ಟ್ರೇಲಿಯಾದ ಕ್ರಿಕೆಟ್ ಕೋಚ್ಗಳಾದ ರಿಚರ್ಡ್ ಕ್ಲಿಪ್ಟನ್, ಜೇಸನ್ ಕಾಕ್ಸ್ ಮತ್ತು ಮಿಚ್ ಡೇವಿ ಮುಖ್ಯ ಅತಿಥಿಗಳಾಗಿದ್ದರು.</p>.<p>ಮಹೇಶ್ ಶೆಣೈ ಮಾತನಾಡಿ, ಶುದ್ಧ ಗಾಳಿ ಮತ್ತು ಶುದ್ಧ ಪರಿಸರ, ಆರೋಗ್ಯ ವೃದ್ಧಿಗೆ ಮಿಯಾವಾಕಿ ವನ ಅಗತ್ಯವಾಗಿದೆ. ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕಟಪಾಡಿ ಪಟ್ಟಣದಲ್ಲಿ 30 ಸೆಂಟ್ಸ್ ಜಾಗದಲ್ಲಿ ಕ್ರಿಕೆಟ್ ಬ್ಯಾಟ್ ಮಾದರಿಯಲ್ಲಿ ಮಿಯಾವಾಕಿ ವನವನ್ನು ರೂಪಿಸಲಾಗುತ್ತಿದೆ ಎಂದರು.</p>.<p>ಸಣ್ಣ ಮಕ್ಕಳಿಂದ ಹಿಡಿದು ಹಿರಿಯರ ತನಕ ಕ್ರಿಕೆಟ್ಗೆ ಹೆಚ್ಚಿನ ಆಸಕ್ತಿ ಇರುವ ಕಾರಣ, ಇದೇ ಆಸಕ್ತಿಯನ್ನು ಪರಿಸರ ಜಾಗೃತಿಗೆ ಬಳಸುವ ಉದ್ದೇಶದಿಂದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಈ ವನ ನಿರ್ಮಾಣವಾಗಲಿದೆ ಎಂದು ಹೇಳಿದರು. ಗಣೇಶ್ ಪೈ, ಪರಿಸರವಾದಿ ಪ್ರೇಮಾನಂದ ಕಲ್ಮಾಡಿ, ರಮೇಶ್ ಕಿಣಿ, ಶರಾವತಿ ರವಿ ರಾಜ್, ಅವಿನಾಶ್ ಕಾಮತ್, ಸುಧಾಕರ್ ಕಿಣಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-28-1002874228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>