<p><strong>ಉಡುಪಿ:</strong> ಜ.18, 2022ರಿಂದ ಆರಂಭವಾಗಲಿರುವ ಕೃಷ್ಣಾಪುರ ಮಠದ ಪರ್ಯಾಯ ಪೂರ್ವಭಾವಿಯಾಗಿ ಭಾನುವಾರ ಕೃಷ್ಣಮಠದಲ್ಲಿ ಕಟ್ಟಿಗೆ ಮುಹೂರ್ತ ನೆರವೇರಿತು.</p>.<p>ಮುಂದಿನ ಪರ್ಯಾಯ ಪೀಠಾಧಿಪತಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಗಳ ಸಮ್ಮುಖದಲ್ಲಿ ಮಧ್ವಸರೋವರದ ಈಶಾನ್ಯ ಭಾಗದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಟ್ಟಿಗೆ ಮೂಹೂರ್ತ ನಡೆಯಿತು.</p>.<p>ಇದಕ್ಕೂ ಮುನ್ನ ಕೃಷ್ಣಾಪುರ ಮಠದ ಪಟ್ಟದ ದೇವರಾದ ಕಾಳೀಯ ಮರ್ಧನ ಕೃಷ್ಣ ಹಾಗೂ ನರಸಿಂಹ ದೇವರಿಗೆ ಪೂಜೆ ಸಲ್ಲಿಸಲಾಯಿತು. ರಥಬೀದಿಯಲ್ಲಿ ಕಟ್ಟಿಗೆಯ ಹೊರೆಯನ್ನು ಹೊತ್ತು ಚಂದ್ರಮೌಳೇಶ್ವರ, ಅನಂತೇಶ್ವರ ದೇವರ ದರ್ಶನ ಮಾಡಲಾಯಿತು. ಅಷ್ಟಮಠಗಳ ವಿದ್ವಾಂಸರಿಗೆ ನವಗ್ರಹ ದಾನ ಹಾಗೂ ಗೌರವ ಸಮರ್ಪಿಸಲಾಯಿತು.</p>.<p>ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ, ಕಟ್ಟಿಗೆ ಮುಹೂರ್ತ ಹಾಗೂ ಭತ್ತ ಮುಹೂರ್ತ ನಡೆಯುತ್ತದೆ. ಮುಂದಿನ ಪರ್ಯಾಯದ ಅವಧಿಯಲ್ಲಿ ಅನ್ನದಾಸೋಹಕ್ಕೆ ಯಾವುದೇ ಸಮಸ್ಯೆಯಾಗಬಾರದು ಎಂಬುದು ಮುಹೂರ್ತಗಳ ಆಚರಣೆ ಹಿಂದಿರುವ ಉದ್ದೇಶ.</p>.<p>ಬಾಳೆ ಎಲೆಗಳ ಕೊರತೆಯಾಗಬಾರದು ಎಂದು ಬಾಳೆ ಮುಹೂರ್ತ, ಉರುವಲಿಗೆ ಕಟ್ಟಿಗೆ ಕೊರತೆಯಾಗಬಾರದು ಎಂದು ಕಟ್ಟಿಗೆ ಮುಹೂರ್ತ, ಆಹಾರ ಪದಾರ್ಥಗಳ ಅಭಾವ ಎದುರಾಗಬಾರದು ಎಂದು ಅಕ್ಕಿ ಹಾಗೂ ಭತ್ತ ಮುಹೂರ್ತ ನಡೆಯುತ್ತದೆ. ಕೃಷ್ಣಾಪುರ ಮಠ ಈಗಾಗಲೇ ಬಾಳೆ, ಅಕ್ಕಿ, ಕಟ್ಟಿಗೆ ಮೂಹೂರ್ತ ಮುಗಿಸಿದ್ದು, ಭತ್ತದ ಮುಹೂರ್ತ ಮಾತ್ರ ಬಾಕಿ ಇದೆ.</p>.<p>ಮುಂದಿನ ಪರ್ಯಾಯಕ್ಕೆ ಸಜ್ಜಾಗಿದ್ದೇವೆ ಎಂಬ ಸೂಚನೆಯನ್ನು ಹಾಲಿ ಪರ್ಯಾಯ ಮಠಕ್ಕೆ ಮುಟ್ಟಿಸುವುದು ಮೂಹೂರ್ತಗಳ ಆಚರಣೆಯ ಹಿಂದಿರುವ ಉದ್ದೇಶಗಳಲ್ಲೊಂದು ಎನ್ನುತ್ತಾರೆ ಮಠದ ವಿದ್ವಾಂಸರು.</p>.<p>ಕಟ್ಟಿಗೆ ಮೂಹೂರ್ತದ ಸಂದರ್ಭ ಕಟೀಲು ದೇವಸ್ಥಾನದ ಅನಂತ ಪದ್ಮನಾಭ ಅಸ್ರಣ್ಣ, ಹರಿನಾರಾಯಣದಾಸ ಅಸ್ರಣ್ಣ, ಕಮಲಾದೇವಿ ಪ್ರಸಾಸ ಅಸ್ರಣ್ಣ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ದಕ್ಷಿಣ ಕನ್ನಡ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕುರ, ಶಿರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜ.18, 2022ರಿಂದ ಆರಂಭವಾಗಲಿರುವ ಕೃಷ್ಣಾಪುರ ಮಠದ ಪರ್ಯಾಯ ಪೂರ್ವಭಾವಿಯಾಗಿ ಭಾನುವಾರ ಕೃಷ್ಣಮಠದಲ್ಲಿ ಕಟ್ಟಿಗೆ ಮುಹೂರ್ತ ನೆರವೇರಿತು.</p>.<p>ಮುಂದಿನ ಪರ್ಯಾಯ ಪೀಠಾಧಿಪತಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಗಳ ಸಮ್ಮುಖದಲ್ಲಿ ಮಧ್ವಸರೋವರದ ಈಶಾನ್ಯ ಭಾಗದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಟ್ಟಿಗೆ ಮೂಹೂರ್ತ ನಡೆಯಿತು.</p>.<p>ಇದಕ್ಕೂ ಮುನ್ನ ಕೃಷ್ಣಾಪುರ ಮಠದ ಪಟ್ಟದ ದೇವರಾದ ಕಾಳೀಯ ಮರ್ಧನ ಕೃಷ್ಣ ಹಾಗೂ ನರಸಿಂಹ ದೇವರಿಗೆ ಪೂಜೆ ಸಲ್ಲಿಸಲಾಯಿತು. ರಥಬೀದಿಯಲ್ಲಿ ಕಟ್ಟಿಗೆಯ ಹೊರೆಯನ್ನು ಹೊತ್ತು ಚಂದ್ರಮೌಳೇಶ್ವರ, ಅನಂತೇಶ್ವರ ದೇವರ ದರ್ಶನ ಮಾಡಲಾಯಿತು. ಅಷ್ಟಮಠಗಳ ವಿದ್ವಾಂಸರಿಗೆ ನವಗ್ರಹ ದಾನ ಹಾಗೂ ಗೌರವ ಸಮರ್ಪಿಸಲಾಯಿತು.</p>.<p>ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ, ಕಟ್ಟಿಗೆ ಮುಹೂರ್ತ ಹಾಗೂ ಭತ್ತ ಮುಹೂರ್ತ ನಡೆಯುತ್ತದೆ. ಮುಂದಿನ ಪರ್ಯಾಯದ ಅವಧಿಯಲ್ಲಿ ಅನ್ನದಾಸೋಹಕ್ಕೆ ಯಾವುದೇ ಸಮಸ್ಯೆಯಾಗಬಾರದು ಎಂಬುದು ಮುಹೂರ್ತಗಳ ಆಚರಣೆ ಹಿಂದಿರುವ ಉದ್ದೇಶ.</p>.<p>ಬಾಳೆ ಎಲೆಗಳ ಕೊರತೆಯಾಗಬಾರದು ಎಂದು ಬಾಳೆ ಮುಹೂರ್ತ, ಉರುವಲಿಗೆ ಕಟ್ಟಿಗೆ ಕೊರತೆಯಾಗಬಾರದು ಎಂದು ಕಟ್ಟಿಗೆ ಮುಹೂರ್ತ, ಆಹಾರ ಪದಾರ್ಥಗಳ ಅಭಾವ ಎದುರಾಗಬಾರದು ಎಂದು ಅಕ್ಕಿ ಹಾಗೂ ಭತ್ತ ಮುಹೂರ್ತ ನಡೆಯುತ್ತದೆ. ಕೃಷ್ಣಾಪುರ ಮಠ ಈಗಾಗಲೇ ಬಾಳೆ, ಅಕ್ಕಿ, ಕಟ್ಟಿಗೆ ಮೂಹೂರ್ತ ಮುಗಿಸಿದ್ದು, ಭತ್ತದ ಮುಹೂರ್ತ ಮಾತ್ರ ಬಾಕಿ ಇದೆ.</p>.<p>ಮುಂದಿನ ಪರ್ಯಾಯಕ್ಕೆ ಸಜ್ಜಾಗಿದ್ದೇವೆ ಎಂಬ ಸೂಚನೆಯನ್ನು ಹಾಲಿ ಪರ್ಯಾಯ ಮಠಕ್ಕೆ ಮುಟ್ಟಿಸುವುದು ಮೂಹೂರ್ತಗಳ ಆಚರಣೆಯ ಹಿಂದಿರುವ ಉದ್ದೇಶಗಳಲ್ಲೊಂದು ಎನ್ನುತ್ತಾರೆ ಮಠದ ವಿದ್ವಾಂಸರು.</p>.<p>ಕಟ್ಟಿಗೆ ಮೂಹೂರ್ತದ ಸಂದರ್ಭ ಕಟೀಲು ದೇವಸ್ಥಾನದ ಅನಂತ ಪದ್ಮನಾಭ ಅಸ್ರಣ್ಣ, ಹರಿನಾರಾಯಣದಾಸ ಅಸ್ರಣ್ಣ, ಕಮಲಾದೇವಿ ಪ್ರಸಾಸ ಅಸ್ರಣ್ಣ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ದಕ್ಷಿಣ ಕನ್ನಡ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕುರ, ಶಿರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>