ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ 'ನಾಗಶ್ರೀ ಕಾವ್ಯ ಪ್ರಶಸ್ತಿ'

Last Updated 4 ಜುಲೈ 2021, 15:15 IST
ಅಕ್ಷರ ಗಾತ್ರ

ಉಡುಪಿ: ತುಮಕೂರಿನ ನಾಗಶ್ರೀ ಪ್ರತಿಷ್ಠಾನ ನೀಡುವ 2021ನೇ ಸಾಲಿನ ನಾಗಶ್ರೀ ಕಾವ್ಯ ಪ್ರಶಸ್ತಿ ಉಡುಪಿಯ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅವನು ಹೆಣ್ಣಾಗಬೇಕು’ ಕವನ ಸಂಕಲನಕ್ಕೆ ದೊರಕಿದೆ.

ಪ್ರಶಸ್ತಿಯು ₹ 5000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಾತ್ಯಾಯಿನಿ ಕುಂಜಿಬೆಟ್ಟು ಪ್ರಸ್ತುತ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ತುಮಕೂರು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಶೀಘ್ರ ನಡೆಯಲಿದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕರಾದ ಎಚ್‌.ಡಿ.ತೇಜಾವತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT