<p><strong>ಕಾಪು</strong>: ಹಿಂದೂ ಮುಸ್ಲಿಂ ಭಾವೈಕ್ಯತೆಯ ಕೈಪುಂಜಾಲ್ ಸಮುದ್ರ ಕಿನಾರೆಯಲ್ಲಿರುವ ಸಯ್ಯದ್ ಅರಭಿ ವಲಿಯುಲ್ಲಾರವರ ದರ್ಗಾದಲ್ಲಿ ವರ್ಷಂಪ್ರತಿ ನಡೆಸುತ್ತಾ ಬಂದಿರುವ ಸಫರ್ ಝಿಯಾರತ್ ಸಮಾರಂಭವು, ಸೆಪ್ಟಂಬರ್ ೨೧ರಂದು ನಡೆಯಲಿದೆ ಎಂದು ಸಮಿತಿ ಸದಸ್ಯ ಅಮೀರ್ ಹಂಝ ಹೇಳಿದ್ದಾರೆ.</p>.<p>ಅವರು ಕಾಪುವಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕಾಪು-ಪೊಲಿಪು ಜಾಮಿಯಾ ಮಸೀದಿಯ ಆಡಳಿತಕ್ಕೆ ಒಳಪಟ್ಟ ಕೈಪುಂಜಾಲ್ ಸಯ್ಯದ್ ಅರಭಿ ವಲಿಯುಲ್ಲಾರವರ ದರ್ಗಾದಲ್ಲಿ ಸಫರ್ ಝಿಯಾರತ್ ಸಮಾರಂಭವು, ಕಳೆದ ಎರಡು ವರ್ಷ ಕೋವಿಡ್ ಕಾರಣದಿಂದ ಸಾಂಕೇತಿಕವಾಗಿ ನಡೆಸಲಾಗಿತ್ತು. ಈ ಭಾರಿ ವಿಜೃಂಭಣೆಯಿಂದ ಸಫರ್ ಝಿಯಾರತ್ ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ, ಕಾಪು ಖಾಝಿ ಅಲ್ ಹಾಜ್ ಪಿ.ಬಿ.ಅಹ್ಮದ್ ಮುಸ್ಲಿಯಾರ್ ರವರು ದುಆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಂಜೆ 7 ಗಂಟೆ ತನಕ ನಡೆಯಲಿದೆ. ಈ ವಾರ್ಷಿಕ ಝಿಯಾರತ್ ಸಮಾರಂಭ ಅಲ್ಲದೇ ಬೇರೆ ದಿನಗಳಲ್ಲಿ ಅಲ್ಲಿಗೆ ಝಿಯಾರತ್ ಗೆ ಬರುವವರಿಗೆ ಸಂಜೆ ೬ಗಂಟೆ ತ ಅವಕಾಶ ಮಾತ್ರ ಇರುತ್ತದೆ.</p>.<p>ಕಾರ್ಯಕ್ರಮವನ್ನು ಪೊಲಿಪು ಜಾಮಿಯಾ ಮಸೀದಿಯ ಖತೀಬರಾದ ಮುಹಮ್ಮದ್ ಇರ್ಷಾದ್ ಸಅದಿಯವರು ಉದ್ಘಾಟಿಸಲಿದ್ದಾರೆ. ಪೊಲಿಪು ಜಾಮಿಯಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾದ ಅಬ್ದುಲ್ಲ ಸೂಪರ್ ಸ್ಟಾರ್, ಅವರ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ದಿ.ಮಹಮ್ಮದ್ ರವರ ಮಗ ಸರ್ಫರಾಝ್ ರವರ ಉಸ್ತುವಾರಿಯಲ್ಲಿ ಈ ಬಾರಿ ಸಯ್ಯದ್ ಅರಭಿ ವಲಿಯುಲ್ಲಾ ರವರ ದರ್ಗಾದಲ್ಲಿ ಆಂತರಿಕ ಜೀರ್ಣೋದ್ಧಾರ ನಡೆದಿದ್ದು, ಜಾಗದ ಮಾಲೀಕರಾದ ನರೇಂದ್ರ ಶ್ರೀಯಾನ್ ಮತ್ತು ಗುಣವಂತ ಶ್ರೀಯಾನ್ ಹಾಗೂ ಕುಟುಂಬದವರು ತುಂಬು ಸಹಕಾರ ನೀಡಿದ್ದಾರೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಎಚ್.ಅಬ್ದುಲ್ಲಾ, ಉಪಾಧ್ಯಕ್ಷ ರಜಬ್ ಹಾಜಿ ಮೈದಿನ್, ಇಮ್ತಿಯಾಝ್ ಅಹ್ಮದ್, ಕಾರ್ಯಕ್ರಮದ ಉಸ್ತುವಾರಿ ಸರ್ಫರಾಝ್, ಇಲ್ಯಾಸ್, ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು</strong>: ಹಿಂದೂ ಮುಸ್ಲಿಂ ಭಾವೈಕ್ಯತೆಯ ಕೈಪುಂಜಾಲ್ ಸಮುದ್ರ ಕಿನಾರೆಯಲ್ಲಿರುವ ಸಯ್ಯದ್ ಅರಭಿ ವಲಿಯುಲ್ಲಾರವರ ದರ್ಗಾದಲ್ಲಿ ವರ್ಷಂಪ್ರತಿ ನಡೆಸುತ್ತಾ ಬಂದಿರುವ ಸಫರ್ ಝಿಯಾರತ್ ಸಮಾರಂಭವು, ಸೆಪ್ಟಂಬರ್ ೨೧ರಂದು ನಡೆಯಲಿದೆ ಎಂದು ಸಮಿತಿ ಸದಸ್ಯ ಅಮೀರ್ ಹಂಝ ಹೇಳಿದ್ದಾರೆ.</p>.<p>ಅವರು ಕಾಪುವಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕಾಪು-ಪೊಲಿಪು ಜಾಮಿಯಾ ಮಸೀದಿಯ ಆಡಳಿತಕ್ಕೆ ಒಳಪಟ್ಟ ಕೈಪುಂಜಾಲ್ ಸಯ್ಯದ್ ಅರಭಿ ವಲಿಯುಲ್ಲಾರವರ ದರ್ಗಾದಲ್ಲಿ ಸಫರ್ ಝಿಯಾರತ್ ಸಮಾರಂಭವು, ಕಳೆದ ಎರಡು ವರ್ಷ ಕೋವಿಡ್ ಕಾರಣದಿಂದ ಸಾಂಕೇತಿಕವಾಗಿ ನಡೆಸಲಾಗಿತ್ತು. ಈ ಭಾರಿ ವಿಜೃಂಭಣೆಯಿಂದ ಸಫರ್ ಝಿಯಾರತ್ ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ, ಕಾಪು ಖಾಝಿ ಅಲ್ ಹಾಜ್ ಪಿ.ಬಿ.ಅಹ್ಮದ್ ಮುಸ್ಲಿಯಾರ್ ರವರು ದುಆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಂಜೆ 7 ಗಂಟೆ ತನಕ ನಡೆಯಲಿದೆ. ಈ ವಾರ್ಷಿಕ ಝಿಯಾರತ್ ಸಮಾರಂಭ ಅಲ್ಲದೇ ಬೇರೆ ದಿನಗಳಲ್ಲಿ ಅಲ್ಲಿಗೆ ಝಿಯಾರತ್ ಗೆ ಬರುವವರಿಗೆ ಸಂಜೆ ೬ಗಂಟೆ ತ ಅವಕಾಶ ಮಾತ್ರ ಇರುತ್ತದೆ.</p>.<p>ಕಾರ್ಯಕ್ರಮವನ್ನು ಪೊಲಿಪು ಜಾಮಿಯಾ ಮಸೀದಿಯ ಖತೀಬರಾದ ಮುಹಮ್ಮದ್ ಇರ್ಷಾದ್ ಸಅದಿಯವರು ಉದ್ಘಾಟಿಸಲಿದ್ದಾರೆ. ಪೊಲಿಪು ಜಾಮಿಯಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾದ ಅಬ್ದುಲ್ಲ ಸೂಪರ್ ಸ್ಟಾರ್, ಅವರ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ದಿ.ಮಹಮ್ಮದ್ ರವರ ಮಗ ಸರ್ಫರಾಝ್ ರವರ ಉಸ್ತುವಾರಿಯಲ್ಲಿ ಈ ಬಾರಿ ಸಯ್ಯದ್ ಅರಭಿ ವಲಿಯುಲ್ಲಾ ರವರ ದರ್ಗಾದಲ್ಲಿ ಆಂತರಿಕ ಜೀರ್ಣೋದ್ಧಾರ ನಡೆದಿದ್ದು, ಜಾಗದ ಮಾಲೀಕರಾದ ನರೇಂದ್ರ ಶ್ರೀಯಾನ್ ಮತ್ತು ಗುಣವಂತ ಶ್ರೀಯಾನ್ ಹಾಗೂ ಕುಟುಂಬದವರು ತುಂಬು ಸಹಕಾರ ನೀಡಿದ್ದಾರೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಎಚ್.ಅಬ್ದುಲ್ಲಾ, ಉಪಾಧ್ಯಕ್ಷ ರಜಬ್ ಹಾಜಿ ಮೈದಿನ್, ಇಮ್ತಿಯಾಝ್ ಅಹ್ಮದ್, ಕಾರ್ಯಕ್ರಮದ ಉಸ್ತುವಾರಿ ಸರ್ಫರಾಝ್, ಇಲ್ಯಾಸ್, ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>