ನರೇಗಾ ಯೋಜನೆಯಡಿ ಬಚ್ಚಲುಗುಂಡಿಗಳ ನಿರ್ಮಾಣ ಹಾಗೂ ಪೌಷ್ಟಿಕ ತೋಟ ನಿರ್ಮಾಣಕ್ಕೆ ಅವಕಾಶವಿದ್ದು, ಫಲಾನುಭವಿಗಳು ಯೋಜನೆ ಸದುಪಯೋಗ ಮಾಡಿಕೊಳ್ಳುವಂತೆ ಅರಿವು ಮೂಡಿಸಬೇಕು. ಬಚ್ಚಲುಗುಂಡಿಗಳ ನಿರ್ಮಾಣದಿಂದ ಗ್ರಾಮೀಣ ಭಾಗಗಳಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಬಹುದು. ಗರಿಷ್ಠ ₹ 14,000 ಅನುದಾನ ಸರ್ಕಾರದಿಂದ ಸಿಗಲಿದ್ದು, ಈ ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ಮೋಹನ್ ರಾಜ್ ಸೂಚಿಸಿದರು.