ಮಗುವಿನ ನಿಗೂಢ ನಾಪತ್ತೆ ಪ್ರಕರಣ ಸಮಗ್ರ ತನಿಖೆಯಿಂದಷ್ಟೇ ಬಯಲಾಗಬೇಕಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ತನಿಖೆಗೆ ಆದೇಶಿಸಿದ್ದಾರೆ. ಡಿವೈಎಸ್ಪಿ ದಿನೇಶ್ಕುಮಾರ್ ಅವರಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಶ್ವಾನದಳ, ಅಗ್ನಿಶಾಮಕದಳ ಬಂದಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.