ವಿದ್ಯೋದಯ ಶಾಲೆಯ ಸಭಾಂಗಣದಲ್ಲಿ ಭಾನುವಾರ ಪಾದೂರು ಗುರುರಾಜ ಭಟ್ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪನ್ಯಾಸ ನೀಡಿದ ಅವರು, ಪುರಾತತ್ವ ಇಲಾಖೆ ನಿರ್ದೇಶಕ ಡಾ.ಬಿ.ಬಿ. ಲಾಲ್ ನೇತೃತ್ವದಲ್ಲಿ ಬಾಬ್ರಿ ಮಸೀದಿ ಪ್ರದೇಶದ ಉತ್ಖನನ ನಡೆದಾಗ ಅಷ್ಟಮಂಗಲ ಚಿಹ್ನೆ, ಮಕರ, ಕೂರ್ಮ ಚಿಹ್ನೆಗಳು ಸಿಕ್ಕಿದ್ದವು ಎಂದು ಹೇಳಿದರು.