ಉಡುಪಿ: ಮಹಾನವಮಿ ಆಯುಧ ಪೂಜೆಯ ಪ್ರಯುಕ್ತ ಅ.14 ಹಾಗೂ ಮೂರನೇ ಶನಿವಾರವಾದ ಅ.16ರಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಹೊರರೋಗಿಗಳ ವಿಭಾಗಕ್ಕೆ ರಜೆ ಇರುತ್ತದೆ. ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.