<p><strong>ಬ್ರಹ್ಮಾವರ:</strong> ಇಲ್ಲಿಗೆ ಸಮೀಪದ ಕೋಡಿತಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೋಣೆಯನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.</p>.<p>ಶಾಲೆಯ ಹಳೆಯ ವಿದ್ಯಾರ್ಥಿ, ಮೈಸೂರಿನ ನಿವಾಸಿ ಭಾನುಮತಿ ಅವರು ಶಾಲೆಗೆ ಕಂಪ್ಯೂಟರ್ ನೀಡಿದ್ದು, ಬೆಂಗಳೂರಿನ ಜಯವರ್ಧನ ಅವರು ಕಂಪ್ಯೂಟರ್ ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡಿದ್ದು, ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ಬಳಿಕ ಮಾತನಾಡಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ದಾನಿಗಳ ಸಹಕಾರವಿದ್ದರೇ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ಧಿಯನ್ನು ಕಾಣುತ್ತವೆ. ಸರ್ಕಾರದೊಂದಿಗೆ ದಾನಿಗಳ ಸಹಕಾರ ನೀಡಬೇಕು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಕೋಡಿ ತಲೆ ಶಾಲೆಯ ಮುಖ್ಯ ಶಿಕ್ಷಕಿ ಟಿ.ನಾಗರತ್ನ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಗೀತಾ ಖಾರ್ವಿ, ಮಾಜಿ ಸದಸ್ಯರಾದ ಕೃಷ್ಣ ಪೂಜಾರಿ, ಅಣ್ಣಪ್ಪ ಕುಂದರ್, ಮುಖಂಡರಾದ ಸುಧೀರ್ ಕುಮಾರ್, ಸುದಿನ, ಗುತ್ತಿಗೆದಾರ ಉದಯ್ ಕಾಂಚನ್, ಶಿಕ್ಷಕಿ ಸುಪ್ರಿತಾ, ಹೇಮಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-28-1181728233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಇಲ್ಲಿಗೆ ಸಮೀಪದ ಕೋಡಿತಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೋಣೆಯನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.</p>.<p>ಶಾಲೆಯ ಹಳೆಯ ವಿದ್ಯಾರ್ಥಿ, ಮೈಸೂರಿನ ನಿವಾಸಿ ಭಾನುಮತಿ ಅವರು ಶಾಲೆಗೆ ಕಂಪ್ಯೂಟರ್ ನೀಡಿದ್ದು, ಬೆಂಗಳೂರಿನ ಜಯವರ್ಧನ ಅವರು ಕಂಪ್ಯೂಟರ್ ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡಿದ್ದು, ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ಬಳಿಕ ಮಾತನಾಡಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ದಾನಿಗಳ ಸಹಕಾರವಿದ್ದರೇ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ಧಿಯನ್ನು ಕಾಣುತ್ತವೆ. ಸರ್ಕಾರದೊಂದಿಗೆ ದಾನಿಗಳ ಸಹಕಾರ ನೀಡಬೇಕು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಕೋಡಿ ತಲೆ ಶಾಲೆಯ ಮುಖ್ಯ ಶಿಕ್ಷಕಿ ಟಿ.ನಾಗರತ್ನ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಗೀತಾ ಖಾರ್ವಿ, ಮಾಜಿ ಸದಸ್ಯರಾದ ಕೃಷ್ಣ ಪೂಜಾರಿ, ಅಣ್ಣಪ್ಪ ಕುಂದರ್, ಮುಖಂಡರಾದ ಸುಧೀರ್ ಕುಮಾರ್, ಸುದಿನ, ಗುತ್ತಿಗೆದಾರ ಉದಯ್ ಕಾಂಚನ್, ಶಿಕ್ಷಕಿ ಸುಪ್ರಿತಾ, ಹೇಮಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-28-1181728233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>