ಉದ್ಯಮಿ ಯು.ಬಿ.ಶೆಟ್ಟಿ, ಪಕ್ಷದ ಪ್ರಮುಖರಾದ ಮಂಜುನಾಥ ಗೌಡ ತೀರ್ಥಹಳ್ಳಿ, ರಾಜು ಎಸ್. ಪೂಜಾರಿ, ಶಂಕರ್ ಪೂಜಾರಿ ಯಡ್ತರೆ, ರಮೇಶ್ ಗಾಣಿಗ ಕೊಲ್ಲೂರು, ರಂಜಿತ್ ಕುಮಾರ್ ಶೆಟ್ಟಿ, ಶ್ರವಣ್ ಕುಮಾರ್ ಶೆಟ್ಟಿ, ಹರ್ಷಾ ಶೆಟ್ಟಿ, ಗ್ರೀಷ್ಮಾ ಭಿಡೆ ಇದ್ದರು.
‘ಯಾಗದ ಪೂರ್ಣಾಹುತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಪ್ರಾಪ್ತಿಯಾಗಲಿ’ ಎಂಬ ಪ್ರಾರ್ಥನೆ ಸಲ್ಲಿಸಲಾಯಿತೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ನಾನು ರಾಜಕಾರಣಿ, ಖಾವಿ ಬಟ್ಟೆ ಹಾಕಿಕೊಂಡಿಲ್ಲ; ಬಿಳಿ ಬಟ್ಟೆ ಹಾಕಿದ್ದೇನೆ’ ಎಂದು ಮಾರ್ಮಿಕವಾಗಿ ಉತ್ತರಿಸಿದರು.
‘ಒಳ್ಳೆಯ ಕೆಲಸ, ಹೋರಾಟ, ಯುದ್ಧ ಮಾಡಬೇಕಾದರೆ ದೇವರ ಅನುಗ್ರಹ ಮುಖ್ಯ. ಹಾಗಾಗಿ, ಕೊಲ್ಲೂರು ಮೂಕಾಂಬಿಕೆ, ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಮಾಡಿದ್ದೇನೆ’ ಎಂದರು.
ಪ್ರಧಾನ ಅರ್ಚಕರಾದ ಎನ್. ನರಸಿಂಹ ಅಡಿಗ, ಎನ್. ಸುಬ್ರಮಣ್ಯ ಅಡಿಗ ಅವರ ನೇತೃತ್ವದಲ್ಲಿ ನಡೆದ ಯಾಗದ ಪೂರ್ಣಾಹುತಿ, ಧಾರ್ಮಿಕ ವಿಧಿಯಲ್ಲಿ ಡಿಕೆಶಿ ಅವರು ಪತ್ನಿ ಉಷಾ ಅವರೊಂದಿಗೆ ಪಾಲ್ಗೊಂಡಿದ್ದರು.