ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ದೇಗುಲದಲ್ಲಿ ಭಕ್ತರ ಪ್ರವೇಶ ನಿರ್ಬಂಧಿಸಿದ್ದರಿಂದ ಆದಾಯ ಕುಂಠಿತವಾಗಿತ್ತು. ಕಳೆದ 2 ತಿಂಗಳಿನಿಂದ ನಿರ್ಬಂಧ ಸಡಿಲಿಸಿದ್ದು, ಭಕ್ತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಪ್ರತಿದಿನ ಸಾವಿರಾರು ಸಂಖ್ಯೆಯ ಭಕ್ತರು ಹರಕೆಯೊಡನೆ ದೇವಿಗೆ ಕಾಣಿಕೆ ರೂಪದಲ್ಲಿ ಚಿನ್ನಾಭರಣಗಳನ್ನೂ ಸಮರ್ಪಿಸುತ್ತಿದ್ದಾರೆ ಎಂದು ದೇವಳದ ಕಾರ್ಯ ನಿರ್ವಹಣಾಧಿಕಾರಿ ಎಸ್.ಪಿ.ಬಿ ಮಹೇಶ್ ತಿಳಿಸಿದ್ದಾರೆ.